ಶಿವಮೊಗ್ಗ : ಅರಳದ ಕಮಲ, ಸೋತ ಈಶ್ವರಪ್ಪ

ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಪ್ರಾಬಲ್ಯವಿದ್ದರೂ ಏಳು ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಈ ಬಾರಿ ಯಡಿಯೂರಪ್ಪ ಕೆಜೆಪಿ ಕಟ್ಟಿ ಅವರು ಗೆದ್ದರು, ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ರುದ್ರೇಗೌಡ ಎಂಬ ಪ್ರಭಾವಿ ಅಭ್ಯರ್ಥಿ ನಿಲ್ಲಿಸಿ ಈಶ್ವರಪ್ಪಗೆ ಸೋಲಿನ ರುಚಿ ತೋರಿಸಿದರು.
ಮೊದಲ ಕೆಲವು ಸುತ್ತುಗಳಲ್ಲಿ ಈಶ್ವರಪ್ಪ ಮುನ್ನಡೆ ಸಾಧಿಸಿದ್ದರು. ನಂತರ ಬಿರುಗಾಳಿಯಂತೆ ಬಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನ ಕುಮಾರ್ ಮತ್ತು ಕೆಜೆಪಿ ಅಭ್ಯರ್ಥಿ ರುದ್ರೇಗೌಡ ಈಶ್ವರಪ್ಪ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದರು. ಕೊನೆಯ ಸುತ್ತಿನ ಎಣಿಕೆ ಮುಗಿಯುವ ವರೆಗೆ ಈಶ್ವರಪ್ಪ ಎರಡನೇ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಶಿವಮೊಗ್ಗ ನಗರ ಕಾಂಗ್ರೆಸ್ ಕೈ ಸೇರಿತು.
ಯಡಿಯೂರಪ್ಪ ಅವರ ಪ್ರಮುಖ ಅಜೆಂಡಾಗಳು ಎರಡಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬರಬಾರದು ಮತ್ತು ಈಶ್ವರಪ್ಪ ಗೆಲುವು ಸಾಧಿಸಬಾರದು ಎಂಬದು ಎರಡು ಕಸಸುಗಳು ಈಡೇರಿವೆ. ಆದರೆ, ಕೆಜೆಪಿ ಕಿಂಗ್ ಮೇಕರ್ ಆಗಲಿಗೆ ಎಂಬ ಅವರ ವಿಶ್ವಾಸ ಹುಸಿಯಾಗಿದ್ದು, ಕೇವಲ 6 ಸ್ಥಾನಗಳು ಮಾತ್ರ ಕೆಜೆಪಿ ಮಡಿಲು ಸೇರಿವೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಬಿಜೆಪಿ ಒಂದು ಸ್ಥಾನ ಗಳಿಸುವಲ್ಲಿ ಬಿಜೆಪಿ ವಿಫಲವಾಗಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಕಿಮ್ಮನೆ ರತ್ನಾಕರ ಎರಡನೇ ಬಾರಿ ಗೆಲುವು ಸಾಧಿಸಿದ್ದರೆ, ಸಾಗರ ಕ್ಷೇತ್ರದಲ್ಲಿ ಅಳಿಯನಿಗೆ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಸೋಲುಣಿಸಿದ್ದಾರೆ.
ಜೆಡಿಎಸ್ ಸೊರಬ, ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಮೂರು ಸ್ಥಾನಗಳನ್ನು ಪಡೆದು ಬಲ ಹೆಚ್ಚಿಸಿಕೊಂಡಿದೆ.
ಶಿವಮೊಗ್ಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಲ್ಲಿ: ಗೆದ್ದವರು, ಸೋತವರ ವಿವರ ಹೀಗಿದೆ:
| ಕ್ಷೇತ್ರ | ಗೆದ್ದವರು | ಪಕ್ಷ | ಪಡೆದ ಮತಗಳು | ಸೋತವರು | ಪಕ್ಷ | ಪಡೆದ ಮತಗಳು |
| ಶಿವಮೊಗ್ಗ ನಗರ | ಕೆ.ಬಿ.ಪ್ರಸನ್ನ ಕುಮಾರ್ | ಕಾಂಗ್ರೆಸ್ | 39355 | ರುದ್ರೇಗೌಡ | ಕೆಜೆಪಿ | 39077 |
| ಶಿವಮೊಗ್ಗ ಗ್ರಾಮಾಂತರ | ಶಾರದಾ ಪೂರಾನಾಯ್ಕ್ | ಜೆಡಿಎಸ್ | 48639 | ಜಿ.ಬಸವಣ್ಯಪ್ಪ | ಕೆಜೆಪಿ | 38530 |
| ತೀರ್ಥಹಳ್ಳಿ | ಕಿಮ್ಮನೆ ರತ್ನಾಕರ | ಕಾಂಗ್ರೆಸ್ | 37160 | ಆರ್.ಎಂ.ಮಂಜುನಾಥ ಗೌಡ | ಕೆಜೆಪಿ | 35817 |
| ಸಾಗರ | ಕಾಗೋಡು ತಿಮ್ಮಪ್ಪ | ಕಾಂಗ್ರೆಸ್ | 71960 | ಬಿ.ಜಯಂತ್ | ಕೆಜೆಪಿ | 30712 |
| ಶಿಕಾರಿಪುರ | ಬಿ.ಎಸ್.ಯಡಿಯೂರಪ್ಪ | ಕೆಜೆಪಿ | 69126 | ಶಾಂತವೀರಪ್ಪ ಗೌಡ | ಕಾಂಗ್ರೆಸ್ | 44701 |
| ಸೊರಬ | ಮಧು ಬಂಗಾರಪ್ಪ | ಜೆಡಿಎಸ್ | 58541 | ಹಾಲಪ್ಪ | ಕೆಜೆಪಿ | 37316 |
| ಭದ್ರಾವತಿ | ಅಪ್ಪಾಜಿ ಗೌಡ | ಜೆಡಿಎಸ್ | 78370 | ಬಿ.ಕೆ.ಸಂಗಮೇಶ್ | ಪಕ್ಷೇತರ | 34271 |
ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಉಡುಪಿ | ಚಿಕ್ಕಮಗಳೂರು | ತುಮಕೂರು | ಚಿಕ್ಕಬಳ್ಳಾಪುರ | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications