ಬ್ಲೂ ಬಾಯ್ಸ್ ಇಬ್ಬರಿಗೆ ಸೋಲು, ಒಬ್ಬರಿಗೆ ಗೆಲುವು

ಸದನದಲ್ಲಿ ನೀಲಿ ಚಿತ್ರ ನೋಡಿ ಬ್ಲೂ ಬಾಯ್ಸ್ ಎಂದೇ ಖ್ಯಾತಿಗಳಿಸಿದ್ದ ಕೃಷ್ಣ ಪಾಲೇಮಾರ್ ಮತ್ತು ಸಿ.ಸಿ.ಪಾಟೀಲ್ ಚುನಾವಣೆಯಲ್ಲಿ ಸೋತು ಮನೆ ಸೇರಿದ್ದರೆ, ಅಥಣಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ.
2012ರ ಫೆಬ್ರವರಿ 7ರಂದು ವಿಧಾನಸಭಾ ಕಲಾಪ ನಡೆಯುತ್ತಿರುವಾಗ ಮೂವರು ಸಚಿವರು ಅಶ್ಲೀಲ ವಿಡಿಯೋ ನೋಡುತ್ತಾ ಕಾಲ ಕಳೆಯುತ್ತಿದ್ದರು. ಈ ಪ್ರಕರಣದಿಂದ ಬಿಜೆಪಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸದನ ಸಮಿತಿ ಮೂವರಿಗೂ ಕ್ಲೀನ್ ಚಿಟ್ ನೀಡಿತ್ತು.
ಸದನ ಸಮಿತಿಯ ಲಕ್ಷ್ಮಣ್ ಸವದಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿತ್ತು. ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರ ವಿರುದ್ಧದ ಆರೋಪ ಸಾಬೀತುಪಡಿಸಬಲ್ಲ ಸಾಕ್ಷ್ಯಾಧಾರಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.
ತಮ್ಮ ಸಚಿವ ಸ್ಥಾನ ಕಳೆದುಕೊಂಡು ಕೇವಲ ಶಾಸಕರಾಗಿ ಮುಂದುವರೆದಿದ್ದ ಮೂವರು 2013ರ ಚುನಾವಣೆಗೆ ಸ್ಪರ್ಧಿಸಿದ್ದರು. ಸಿ.ಸಿ.ಪಾಟೀಲ್ ತಮ್ಮ ಅಂಗರಕ್ಷಕನಿಂದ ಆಕಸ್ಮಿಕವಾಗಿ ಗುಂಡೇಟು ತಿಂದು ಆಸ್ಪತ್ರಗೆ ದಾಖಲಾಗಿದ್ದರು. ಅನುಕಂಪದ ಆಧಾರದ ಮೇಲೆಯೂ ಅವರು ಗೆಲ್ಲಲಿಲ್ಲ ಎಂಬುದು ಗಮನಾರ್ಹ.
ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ 74299 ಮತಗಳನ್ನು ಪಡೆದು ಜಯಗಳಿಸಿ ಮತ್ತೆ ವಿಧಾನಸಭೆ ಪ್ರವೇಶಿಸಿದ್ದಾರೆ. ಆದರೆ, ವಿರೋಧ ಪಕ್ಷದ ಸ್ಥಾನದಲ್ಲಿ ಐದು ವರ್ಷ ಕುಳಿತುಕೊಳ್ಳಬೇಕು.
ಮಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೃಷ್ಣ ಪಾಲೇಮಾರ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಮೋಯಿದ್ದಿನ್ ಬಾವಾ ಸೋಲಿನ ರುಚಿ ತೋರಿಸಿದ್ದಾರೆ. ಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದಿರುವ ಪಾಲೇಮಾರ್, 64524 ಮತಗಳನ್ನು ಪಡೆದು ಸುಮಾರು 5 ಸಾವಿರಕ್ಕಿಂತಲೂ ಹೆಚ್ಚಿನ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.
ನರಗುಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿ.ಸಿ.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ ವಿರುದ್ದ 8 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರೀ ಸೋಲು ಅನುಭವಿಸಿದ್ದಾರೆ. ಕ್ಷೇತ್ರದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ಪಾಟೀಲ್ 51035 ಮತಗಳನ್ನು ಪಡೆದಿದ್ದಾರೆ.
ಇಬ್ಬರನ್ನು ಸೋಲಿಸುವ ಮೂಲಕ ಮತದಾರ ಪ್ರಭು ಶಾಸಕರಾಗಿ ಆಯ್ಕೆಯಾದ ನಂತರ ಇವರು ಮಾಡಿದ ಘನ ಕಾರ್ಯಕ್ಕೆ ಸರಿಯಾದ ಶಿಕ್ಷೆ ನೀಡಿದ್ದಾನೆ. ಗೆದ್ದು ವಿಧಾನಸಭೆ ಪ್ರವೇಶಿಸಿದ ಇನ್ನೊಬ್ಬರು ಈ ಬಾರಿ ವಿಧಾನಸಭೆಯಲ್ಲಿ ಅವಾಂತರ ಮಾಡದಿರಲಿ ಎಂಬುದು ಕರ್ನಾಟಕದ ಜನರ ಆಶಯ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications