ಗದಗ ಮುದುಡಿದ ಕಮಲ, ಜಿಲ್ಲೆ ಕೈವಶ

2008ರ ಚುನಾವಣೆಯಲ್ಲಿ ಗದಗ ಜಿಲ್ಲೆಯಲ್ಲಿ ಕಮಲ ಅರಳಿತ್ತು. ನಾಲ್ಕು ಸ್ಥಾನಗಳನ್ನು ಪಡೆದ ಬಿಜೆಪಿ ಕೈ ಪಾಳಯಕ್ಕೆ ಒಂದು ಸ್ಥಾನ ನೀಡದೆ ನಿರಾಸೆ ಉಂಟು ಮಾಡಿತ್ತು. ಸೇಡಿಗೆ ಸೇಡು ಎಂಬಂತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ತಕ್ಕಪಾಠ ಕಲಿಸಿದೆ.
ಗನ್ ಮ್ಯಾನ್ ನಿಂದ ಆಕಸ್ಮಿಕವಾಗಿ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ ನರಗುಂದ ಕ್ಷೇತ್ರದ ಮಾಜಿ ಶಾಸಕ ಸಿ.ಸಿ.ಪಾಟೀಲ್ ಅವರಿಗೂ ಅನುಕಂಪದ ಮತಗಳು ಕೈ ಹಿಡಿಯದೆ ಸೋಲು ಅನುಭವಿಸುವಂತಾಗಿದೆ. ಶಿರಹಟ್ಟಿ, ಗದಗ, ರೋಣ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಗಳಿಸಿದ್ದು, ಬಿಜೆಪಿ ಒಂದು ಸ್ಥಾನ ಪಡೆಯುವಲ್ಲಿಯೂ ವಿಫಲವಾಗಿದೆ.
ಗದಗ ಪಕ್ಕದಲ್ಲಿರುವ ಧಾರವಾಡ ಜಿಲ್ಲೆಯ ಜಗದೀಶ್ ಶೆಟ್ಟರ್ ಅವರ ಪ್ರಭಾವ ಗದಗದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ಚುಣಾವಣೆ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಗಳು ಸರಿಯಾದ ಕಾರ್ಯತಂತ್ರ ರೂಪಿಸಿದ್ದರು. ಶ್ರಮಕ್ಕೆ ಪ್ರತಿಫಲ ಎಂಬಂತೆ ಜಿಲ್ಲೆ ಕೈವಶವಾಗಿದೆ.
ಗದಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಲ್ಲಿ : ಗೆದ್ದವರು, ಸೋತವರ ವಿವರ ಹೀಗಿದೆ:
| ಕ್ಷೇತ್ರ | ಗೆದ್ದವರು | ಪಕ್ಷ | ಪಡೆದ ಮತಗಳು | ಸೋತವರು | ಪಕ್ಷ | ಪಡೆದ ಮತಗಳು |
| ಶಿರಹಟ್ಟಿ | ರಾಮಕೃಷ್ಣ ದೊಡ್ಡಮನಿ | ಕಾಂಗ್ರೆಸ್ | 44,738 | ರಾಮಣ್ಣ ಲಮಾಣಿ | ಬಿಜೆಪಿ | 44,423 |
| ಗದಗ | ಎಚ್.ಕೆ.ಪಾಟೀಲ್ | ಕಾಂಗ್ರೆಸ್ | 70,475 | ಅನಿಲ ಮೆಣಸಿನಕಾಯಿ | ಬಿಎಸ್ಆರ್ | 36,748 |
| ರೋಣ | ಜಿ.ಎಸ್.ಪಾಟೀಲ್ | ಕಾಂಗ್ರೆಸ್ | 74,219 | ಕಳಕಪ್ಪ ಬಂಡಿ | ಬಿಜೆಪಿ | 56,054 |
| ನರಗುಂದ | ಬಿ.ಆರ್.ಯಾವಗಲ್ | ಕಾಂಗ್ರೆಸ್ | 59,470 | ಸಿ.ಸಿ.ಪಾಟೀಲ್ | ಬಿಜೆಪಿ | 50,938 |
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications