ಸಿಎಂ ಆಗದಿದ್ದರೆ ಸಿದ್ದು ಬಂಡಾಯಕ್ಕೆ ಕ್ಷಣಗಣನೆ
ಮೈಸೂರು, ಮೇ 10- ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುತ್ತಾರಾ? ಗೊತ್ತಿಲ್ಲ. ಆದರೆ ಅವರು ಸಿಎಂ ಆಗದಿದ್ದರೆ 'ಸಿದ್ದು ಬಂಡಾಯ ಆರಂಭವಾಯ್ತು' ಎಂದು ಘಂಟಾಘೋಷವಾಗಿ ಹೇಳಬಹುದು. ಈ ಬಗ್ಗೆ ಇಂದು ಸ್ಪಷ್ಟ ಸುಳಿವು ಸಿಗಬಹುದು.
ಅದಮ್ಯ ಉತ್ಸಾಹ/ವಿಶ್ವಾಸದಲ್ಲಿರುವ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಇನ್ನೂ ಹೆಜ್ಜೆಯಿಟ್ಟಿಲ್ಲವಾದರೂ ಆ ಬಗ್ಗೆ ಅವರ ಬೆಂಬಲಿಗ ಶಾಸಕರು ಅದಾಗಲೇ ಶುರುಹಚ್ಚಿಕೊಂಡಿದ್ದಾರೆ. ಆದರೆ ಸಿದ್ರಾಮಣ್ಣನೇ ಸಿಎಂ ಆಗಬೇಕು ಎಂಬುದು ಆ ನೂತನ ಶಾಸಕರ ವರಾತ.

ಅಸಲಿಗೆ ಸಿದ್ದರಾಮಯ್ಯ ಸಿಎಂ ಆಗೋದ್ ಬೇಡ ಎನ್ನುವವರ ಸಂಖ್ಯೆಯೂ ಕಾಂಗ್ರೆಸ್ಸಿನಲ್ಲಿ ಬಹಳಷ್ಟಿದೆ. ಆದರೆ ಹಾಗಂತ ಸಿದ್ದು ಬೇಡ ಎನ್ನವುದಾದರೆ ಕಾಂಗ್ರೆಸ್ಸಿಗೆ ಭಾರಿ ಡ್ಯಾಮೇಜ್ ಮಾಡಲು ಸಿದ್ದು ಪಡೆ ಸಿದ್ಧವಾಗಿದೆ.
ಅದಕ್ಕೂ ಮುನ್ನ, ಅನಾಯಾಸವಾಗಿ ದೊರೆತಿರುವ ಅವಕಾಶವನ್ನು ಹಾಳುಮಾಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧವಿಲ್ಲ. ಆದರೆ ಸಿಎಂ ಆಯ್ಕೆ ಸಮಸ್ಯೆಯಾಗಿ ಕಾಡುತ್ತಿರುವುದಂತೂ ದಿಟ. ಸಮಸ್ಯೆಯನ್ನು ನಾಜೂಕಾಗಿ ಪರಿಹರಿಸುವಲ್ಲಿ ಹೈಕಮಾಂಡ್ ಸೋತರೆ ಏಳು ವರ್ಷಗಳಿಂದ ವನವಾಸದಲ್ಲಿರುವ ಕಾಂಗ್ರೆಸ್ ಅಂಧಃಪತನ ಕಾಣುವುದಂತೂ ಖಚಿತ.
ಹಾಗೆ ನೋಡಿದರೆ ಚುನಾವಣೆ ಘೋಷಣೆಗೂ ಮುನ್ನವೇ ಕರ್ನಾಟಕದ ಮತದಾರ ಈ ಬಾರಿ ಕಾಂಗ್ರೆಸ್ಸಿಗೇ ಮತ ಹಾಕಬೇಕು ಎಂದು ನಿರ್ಧರಿಸಿಯಾಗಿತ್ತು. ಅಂತಹುದರಲ್ಲಿ ಮತ್ತದೇ ಒಳಜಗಳಗಳು, ದುರಾಡಳಿತ ಶುರುವಿಟ್ಟುಕೊಂಡರೆ ಕಾಂಗ್ರೆಸ್ಸನ್ನು ಆ ದೇವರೇ ಕಾಪಾಡಬೇಕಾಗುತ್ತದೆ.
ಒಂದು ಮೂಲದ ಪ್ರಕಾರ, ಸಿದ್ದರಾಮಯ್ಯ ಬೆಂಬಲಕ್ಕೆ 40-45 ಶಾಸಕರು ನಿಂತಿದ್ದಾರೆ. ಒಂದು ವೇಳೆ ಹೈಕಮಾಂಡ್ ಕ್ಯಾತೆ ತೆಗೆದು ಸಿದ್ದುಗೆ ಸಿಎಂ ಗದ್ದುಗೆ ನೀಡಲಿದ್ದವೆಂದರೆ ಆ 40-45 ಶಾಸಕರೊಂದಿಗೆ ಸಿದ್ದರಾಮಯ್ಯ ಬಂಡಾಯವೇಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಹಾಗಾದಲ್ಲಿ 'ಕೈ'ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗುತ್ತದೆ ರಾಜ್ಯ ಕಾಂಗ್ರೆಸ್ ಪರಿಸ್ಥಿತಿ. ಯಾವುದಕ್ಕೂ, ಇಂದು ಸಂಜೆಯ ವೇಳೆಗೆ ಸ್ಪಷ್ಟ ಸುಳಿವು ಸಿಗುವ ಲಕ್ಷಣಗಳಿವೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications