ಗಲಾಟೆ ಮಾಡೋದು ಕಾಂಗ್ರೆಸ್ ಸಂಸ್ಕೃತಿಯಲ್ಲ : ಖರ್ಗೆ

ಭಾನುವಾರ (ಮೇ.12) ರಾಜಭವನದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನೇಮಕಾತಿ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ಇದನ್ನು ಎಲ್ಲರೂ ಗೌರವಿಸಬೇಕು. ಹೊಸ ಸರ್ಕಾರಕ್ಕೆ ಬೆಂಬಲ ಕೊಡಬೇಕು ಎಂದು ಕಳಕಳಿಯ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳಿಂದ ಜನ ರೋಸಿ ಹೋಗಿದ್ದಾರೆ. ಅಭಿವೃದ್ಧಿ ಕೆಲಸ-ಕಾರ್ಯಗಳು ಹಲವಾರು ವರ್ಷಗಳಿಂದ ಕುಂಠಿತಗೊಂಡಿವೆ. ಇದನ್ನು ಸರಿದಾರಿಗೆ ತಂದು ಶರವೇಗದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದೆ. ಆದ್ದರಿಂದ ಎಲ್ಲ ದಲಿತ ಮುಖಂಡರು, ಕಾರ್ಯಕರ್ತರು ಅಸಹನೆ, ಆಕ್ರೋಶ, ಪ್ರತಿಭಟನೆ ಬಿಟ್ಟು ಹೊಸ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಖರ್ಗೆ ಅವರು ಮನವಿ ಮಾಡಿಕೊಂಡರು.
ಆದರೆ, ನಾಡಿನ ವಿವಿಧ ಭಾಗಗಳಲ್ಲಿ ಭಾನುವಾರ ಪ್ರತಿಭಟನೆ ಮುಂದುವರೆದಿದೆ. ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ನುಗ್ಗಿದ್ದ ದುಷ್ಕರ್ಮಿಗಳು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ದಲಿತ ಸಂಘಟನೆಗಳು ತುಮಕೂರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ದಲಿತ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಗೆ ಸೂಕ್ತ ಸ್ಥಾನಮಾನಕ್ಕಾಗಿ ಆಗ್ರಹಿಸಿದ್ದಾರೆ. ಸೋನಿಯಾ ಹಾಗೂ ರಾಹುಲ್ ವಿರುದ್ಧ ಕಿಡಿ ಕಾರಿದ್ದಾರೆ. ನಂಜನಗೂಡಿ ಬಂದ್ ಆಚರಿಸಲಾಗುತ್ತಿದ್ದು, ಊಟಿಗೆ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಖರ್ಗೆ ಅವರಿಗೆ ಸಿಎಂ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ (ಮೇ.12) ಚಾಮರಾಜ ನಗರ ಜಿಲ್ಲೆ ಬಂದ್ ನಡೆಸಲು ವಿವಿಧ ದಲಿತ ಸಂಘಟನೆಗಳು ಕರೆ ನೀಡಿವೆ.
ಮುಖ್ಯಮಂತ್ರಿ ನೇಮಕಾತಿ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ಪಾಲನೆ ಮಾಡುವುದಷ್ಟೆ ನಮ್ಮ ಕೆಲಸ ಎಂದು ಪದೇ ಪದೇ ಕೇಳಿದ ಪ್ರಶ್ನೆಗೆ ಖರ್ಗೆ ಅವರು ಒಂದೇ ಉತ್ತರ ಕೊಟ್ಟರು. ನಿಮ್ಮ ಆಶಯಗಳನ್ನು ಈಡೇರಿಸುವಂತಹ ಕಾಲ ಬಂದರೂ ಬರಬಹುದು. ಆದರೆ, ಗಲಾಟೆ ಮಾಡುವುದು ನಮ್ಮ ಸಂಸ್ಕೃತಿಯಲ್ಲ, ನಾನು ಇದನ್ನು ಸಹಿಸುವುದೂ ಇಲ್ಲ ಎಂದರು.
ಒಂದು ವೇಳೆ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳಿಗೆ ಯಾವುದಾದರೂ ಅಸಮಾಧಾನ ಇದ್ದಲ್ಲಿ ಅದನ್ನು ಸೂಕ್ತ ವೇದಿಕೆಯಲ್ಲಿ ಪ್ರಸ್ತಾಪಿಸಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಬೀದಿಗಿಳಿಯುವುದು, ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಒಳ್ಳೆಯದಲ್ಲ. ಇದು ನಮ್ಮ ಸಂಸ್ಕೃತಿಯೂ ಅಲ್ಲ. ಈ ತಕ್ಷಣ ಬೀದಿ ಹೋರಾಟ ನಿಲ್ಲಿಸಬೇಕು ಎಂದರು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications