ಕೋಲಾರ : ಲಡ್ಡು ಶೆಟ್ಟರು ಕಾಂಗ್ರೆಸ್ ಕೈ ಹಿಡಿದರು

ವಿಧಾನಸಭೆ ಚುನಾವಣೆಗೆ ಮಾಲೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯಲಿಲ್ಲ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಅನುಭವಿಸಿದ್ದ ಮಾಜಿ ಮುಜರಾಯಿ ಸಚಿವ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರಿರುವುದು ತೀವ್ರ ಕುತೂಹಲ ಕೆರಳಿಸಿದೆ.
ತಾವು ಚುನಾವಣೆ ಗೆಲ್ಲಬೇಕೆಂದು ತಮ್ಮ ವಿರುದ್ಧ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸದಂತೆ ಮಾಡಿ ಬಿಜೆಪಿ ಪಕ್ಷಕ್ಕೆ ಕೃಷ್ಣಯ್ಯ ಶೆಟ್ಟಿ ಮುಜುಗರ ಉಂಟುಮಾಡಿದ್ದರು. ಆದರೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ವಿರುದ್ದ 18 ಸಾವಿರಕ್ಕೂ ಅಧಿಕ ಮತಗಳ ಅಂತದಿಂದ ಸೋಲುಂಡು ಶೆಟ್ಟರು ಮುಖಭಂಗ ಅನುಭವಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದ ನಂತರ ಕೇಂದ್ರ ಸಚಿವ ಮುನಿಯಪ್ಪ ಭೇಟಿ ಮಾಡಿದ ಕೃಷ್ಣಯ್ಯ ಶೆಟ್ಟಿ ಅವರೊಂದಿಗೆ ಮಾತುಕತೆ ನಡೆಸಿ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರುತ್ತಿರುವುದಾಗಿ ಶೆಟ್ಟಿ ಹೇಳಿದ್ದಾರೆ.
ವರ್ತೂರು ಕೈ ಹಿಡಿತಾರೆ : ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದರು. ಚುನಾವಣೆಯ ಮುಗಿದು ಅವರು ಜಯಗಳಿಸಿದ್ದಾರೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿರುವುದರಿಂದ ಅವರಿಗೆ ಪಕ್ಷೇತರರ ನೆರವು ಬೇಕಾಗಿಲ್ಲ.
ಆದ್ದರಿಂದ ವರ್ತೂರು ಪ್ರಕಾಶ್ ಅವರಿಗೆ ಸಚಿವ ಸ್ಥಾನವಂತೂ ಸಿಗುವುದಿಲ್ಲ. ಆದರೆ, ಒಂದು ಕಾಲದಲ್ಲಿ ಸಿದ್ದರಾಮಯ್ಯ ಬೆಂಬಲಿಗರಾಗಿದ್ದ ವರ್ತೂರು ಸಿದ್ದು ಮುಖ್ಯಮಂತ್ರಿ ಆಗಬೇಕು ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ನಿಜವಾಗಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.
ಆದ್ದರಿಂದ ವರ್ತೂರು ಕಾಂಗ್ರೆಸ್ ಸೇರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಚುನಾವಣೆ ಪ್ರಚಾರ ಸಭೆಯಲ್ಲಿಯೇ ಜಿಲ್ಲೆಯ ಅಭಿವೃದ್ಧಿ ಮಾಡುವುದು ನನ್ನ ಪ್ರಮುಖ ಗುರಿ ಆದ್ದರಿಂದ ಮಾಲೂರಿನ ಕೃಷ್ಣಯ್ಯಶೆಟ್ಟಿ, ಮುಳಬಾಗಿಲಿನ ಕೊತ್ತನೂರು ಮಂಜು ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ ಎಂದು ಅವರು ಹೇಳಿದ್ದರು.
ಸದ್ಯ ಕೃಷ್ಣಯ್ಯ ಶೆಟ್ಟಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಸೇರಿದ್ದಾರೆ. ಕೊತ್ತನೂರು ಮಂಜು ಮತ್ತು ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ವರ್ತೂರು ಮತ್ತು ಕೊತ್ತನೂರು ಮಂಜು ಕಾಂಗ್ರೆಸ್ ಸೇರಿ, ಪಕ್ಷದ ಚಿಹ್ನೆಯಿಂದ ಮತ್ತೊಮ್ಮೆ ಚುನಾವಣೆ ಎದುರಿಸಿ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ.
ಆದರೆ, ಸದ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಲೆಕೆಡಿಸಿಕೊಂಡಿರುವ ಕಾಂಗ್ರೆಸ್ ಪಕ್ಷಾಂತರಿಗಳಿಗೆ ರತ್ನ ಗಂಬಳಿ ಸ್ವಾಗತ ಕೋರುವುದು ಕಷ್ಟಸಾಧ್ಯ. ಆದ್ದರಿಂದ ವರ್ತೂರು ಮತ್ತು ಮಂಜು ಕಾಂಗ್ರೆಸ್ ಸೇರಲು ಕೆಲವು ದಿನ ಕಾಯಬೇಕಾಗಬಹುದು. [ಕೋಲಾರದ ಗೆದ್ದ, ಸೋತ ಅಭ್ಯರ್ಥಿಗಳು]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications