ಸಿದ್ದುಗೆ ಸಿದ್ಧಗಂಗಾಶ್ರೀ ಶುಭ ಹಾರೈಕೆ ಏನು ಗೊತ್ತಾ?

ಪತ್ರದಲ್ಲೇನಿದೆ, ನೀವೇ ಓದಿಕೊಳ್ಳಿ:
'ಸಿದ್ದರಾಮಯ್ಯ ಅವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದೀರಿ ಎಂದು ತಿಳಿದು ತುಂಬಾ ಸಂತೋಷವಾಯಿತು. ನೀವು ರಾಜಕೀಯ ಕ್ಷೇತ್ರದಲ್ಲಿ ಮಾಡುತ್ತಾ ಬಂದಿರುವ ನಿಸ್ವಾರ್ಥ, ಪ್ರಾಮಾಣಿಕ ಸೇವೆಗೆ ಸಂದಿರುವ ಅವಕಾಶವಿದು ಎಂದು ಭಾವಿಸಿರುತ್ತೇವೆ.
ನಿಮ್ಮ ನೇರ ನುಡಿ, ಸದ್ಭಾವದ ದೂರದೃಷ್ಟಿ, ಸರ್ವ ಜನಾಂಗದ ಸರ್ವಾಭಿವೃದ್ಧಿಯ ದೃಷ್ಟಿ ನೀಡಿದ್ದು ಶ್ಲಾಘನೀಯವಾಗಿದೆ.
ಈಗಾಗಲೇ ರಾಜ್ಯದ ರಾಜಕೀಯದಲ್ಲಿ ಅತ್ಯುತ್ತಮ ಕೀರ್ತಿ ಪಡೆದಿರುವ ಸಚಿವರಾಗಿ ಏಳು ಬಾರಿ ಸಮರ್ಥ ಬಜೆಟ್ ಮಂಡಿಸಿರುವ ನಿಮಗೆ ಕರ್ನಾಟಕವನ್ನು ಹೇಗೆ ಮುಂದುವರೆಸಬೇಕು ಎಂಬ ದೂರದೃಷ್ಟಿ ಇದೆ ಎಂದು ನಾವು ಅರಿತಿದ್ದೇವೆ. ದೀನ, ದಲಿತ, ಅಲ್ಪಸಂಖ್ಯಾತರ, ಅನಾಥರ, ಅಸಹಾಯಕರ ಆಪದ್ಭಾಂಧವರಾಗಿ ರಾಜ್ಯದ ಸರ್ವ ಜನಾಂಗದ ಏಳಿಗೆಗೆ ತಾವು ಶ್ರಮಿಸುತ್ತೀರಿ ಎಂಬುದಾಗಿ ಭಾವಿಸಿರುತ್ತೇವೆ.
ನಿಮ್ಮ ಆಡಳಿತಾವಧಿಯಲ್ಲಿ ಕರ್ನಾಟಕ ರಾಷ್ಟ್ರದ ಒಂದನೇ ರಾಜ್ಯವಾಗಲಿ ಎಂಬ ಆಶಾಭಾವನೆ ನಮ್ಮದಾಗಿದೆ. ಪರಮಾತ್ಮ ನಿಮಗೆ ಆಯುರಾರೋಗ್ಯಾದಿ ಅನುಗ್ರಹಿಸಲಿ' ಎಂದು ನಾಡಿನ ಸಾಕ್ಷೀಪ್ರಜ್ಞೆ ಡಾ. ಶಿವಕುಮಾರ ಸ್ವಾಮೀಜಿ ಅವರು ತಮ್ಮ ಶುಭ ಹಾರೈಕೆ ಪತ್ರದಲ್ಲಿ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications