ಲಿವಿಂಗ್ ಟುಗೆದರ್: ಮಹಿಳೆ ಹತ್ಯೆಮಾಡಿ ಸತ್ತ ಇನ್ಸ್ಪೆಕ್ಟರ್

ಇನ್ಸ್ಪೆಕ್ಟರ್ ಬದ್ರಿ ದತ್ (45) ಹಾಗೂ ಗೀತಾ ಶರ್ಮಾ (45) ಮೃತಪಟ್ಟವರು. ಈ ಜೋಡಿ ದೇಹಗಳು ಗುರ್ ಗಾಂವ್ ನ ಸುಶಾಂತ್ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಡಿ ನಗರದಲ್ಲಿ ಅಪಾರ್ಟ್ ಮೆಂಟಿನಲ್ಲಿ ಶನಿವಾರ ಪತ್ತೆಯಾಗಿವೆ. ಇನ್ಸ್ಪೆಕ್ಟರ್ ಬದ್ರಿ ದತ್ ಭಯೋತ್ಪಾದಕರ ನಿಗ್ರಹ ದಳದಲ್ಲಿ ಭಾರಿ ಯಶಸ್ಸು ಕಂಡಿದ್ದರು. ಬದ್ರಿ ಎರಡು ಬಾರಿ ಸಾಹಸ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು.
ಬದ್ರಿ ದತ್, ಗೀತಾಳನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗುರ್ ಗಾಂವ್ ಹೆಚ್ಚುವರಿ ಪೊಲೀಸ್ ಆಯುಕ್ತ ಮಹೇಶ್ವರ್ ದಯಾಳ್ ತಿಳಿಸಿದ್ದಾರೆ. ಆದರೆ ಈ ಹತ್ಯೆಗಳಿಗೆ ನಿಖರ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಪತ್ನಿ ಮತ್ತು ಇಬ್ಬರು ಮಕ್ಕಳು ಫರಿದಾಬಾದಿನಲ್ಲಿ ವಾಸಿಸುತ್ತಿದ್ದಾರೆ. ಕೌಟುಂಬಿಕ ಕಲಹ ಘಟನೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಬದ್ರಿ, ತಮ್ಮ ಪತ್ನಿ ಮಕ್ಕಳನ್ನು ತೊರೆದು ಗೀತಾ ಶರ್ಮಾ ಜತೆ ವಾಸಿಸುತ್ತಿದ್ದರು.
1991ರಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ದಿಲ್ಲಿ ಪೊಲೀಸ್ ಸೇರಿದ್ದ ಬದ್ರಿ, 1999 ರಿಂದ ದೆಹಲಿ ಭಯೋತ್ಪಾದಕ ನಿಗ್ರಹ ದಳದಲ್ಲಿ ವಿಶೇಷಾಧಿಕಾರಿಯಾಗಿ ಸೇವೆಗೆ ನಿಯೋಜನೆಗೊಂಡಿದ್ದರು. ದಳದಲ್ಲಿ ಅತ್ಯಂತ ಚಾಣಾಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications