ಚಿತ್ರಗಳಲ್ಲಿ: ಸಿದ್ದು ಪ್ರಮಾಣ ವಚನ ಸಮಾರಂಭ
ಬೆಂಗಳೂರು, ಮೇ.13: ಕರ್ನಾಟಕದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಸುಮಾರು 9 ವರ್ಷಗಳ ನಂತರ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುತ್ತಿದೆ. ವಿಧಾನಸೌಧದ ಮುಂಭಾಗ ಹಾಗೂ ರಾಜಭವನ ಹೊರತುಪಡಿಸಿ, ಬೇರೆಡೆ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆದಿದ್ದು ಈ ಬಾರಿ ವಿಶೇಷವಾಗಿತ್ತು. ಕಂಠೀರವ ಕ್ರೀಡಾಂಗಣದಲ್ಲಿ ಜನ ಜಾತ್ರೆಯೇ ನೆರೆದಿತ್ತು.
ಸಮಾರಂಭ ಮುಗಿಯುತ್ತಿದ್ದಂತೆ ಸಿದ್ದು ಅಭಿಮಾನಿಯೊಬ್ಬರು ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡು ಮಲ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ದುರ್ಘಟನೆಯೂ ನಡೆಯಿತು. ಕೇಂದ್ರ ಸಚಿವ ವೀರಪ್ಪ ಮೋಯ್ಲಿ, ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬಂದಿದ್ದಾರೆ.
ಸಿಎಂ ಕುಟುಂಬ ಹಾಜರಿ: ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಿದ್ದರಾಮಯ್ಯನವರ ಕುಟುಂಬ ಹಾಗೂ ಬಂಧುವರ್ಗ ಸಾಕ್ಷಿಯಾಯಿತು. ಪತ್ನಿ ಪಾರ್ವತಿ, ಪುತ್ರರಾದ ರಾಕೇಶ್, ಡಾ.ಯತೀಂದ್ರ ಕಾರ್ಯಕ್ರಮದಲ್ಲಿ ಹಾಜರಿದ್ದರು.ಪದಗ್ರಹಣ ಸಮಾರಂಭದ ವೇದಿಕೆ ಸಮೀಪವೇ ಕುಟುಂಬ ವರ್ಗದವರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಸಿದ್ದರಾಮಯ್ಯ ಅವರು ಗರಿ-ಗರಿ ರೇಷ್ಮೆ ಪಂಚೆ, ರೇಷ್ಮೆ ಶರ್ಟ್ ಧರಿಸಿ ವೇದಿಕೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರಗಳು ನಿಮಗಾಗಿ ಇಲ್ಲಿದೆ...

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಜೊತೆ ಸಿದ್ದರಾಮಯ್ಯ ಆತ್ಮೀಯ ಅಪ್ಪುಗೆ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ನಾನು ಹೇಳಿದ ಹಾಗೆ ಹೇಳಿ ಆಯ್ತಾ ಎಂದು ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಶಾಸಕರು, ಅಭಿಮಾನಿಗಳಿಂದ ಸಿದ್ದರಾಮಯ್ಯ ಅವರಿಗೆ ಹಾರ ಅರ್ಪಣೆ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಕಂಠೀರವ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಕಂಠೀರವ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಅವರಿಂದ ಪ್ರತಿಜ್ಞಾ ವಿಧಿ ಭೋದನೆ

ಚಿತ್ರಗಳಲ್ಲಿ: ಸಿದ್ದು ಆದ್ರಪ್ಪ ಸಿಎಂ
ಸಿದ್ದರಾಮಯ್ಯ ರಾಜಕೀಯ ಜೀವನ ಸಂಕ್ಷಿಪ್ತ ಚಿತ್ರಣ
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications