ಸಿದ್ದು ಪ್ರಮಾಣವಚನಕ್ಕೆ ಸಾಹಿತಿಗಳ ದಂಡು

ಕುಮಾರಕೃಪಾದ ತಮ್ಮ ನಿವಾಸದಿಂದ ಜಯನಗರ ಟಿ ಬ್ಲಾಕ್ ನಲ್ಲಿರುವ ಹೆಚ್.ಎಸ್.ದೊರೆಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಅಧೀಕೃತ ಆಹ್ವಾನ ನೀಡಿದರು.
ಸುಮಾರು ಇಪ್ಪತ್ತು ನಿಮಿಷಗಳ ಕಾಲ ದೊರೆಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಅವರ ಸಲಹೆ ಮತ್ತು ಮಾರ್ಗದಶರ್ನಗಳನ್ನು ಪಡೆದರು. ಶನಿವಾರದಿಂದಲೂ ಸಿದ್ದರಾಮಯ್ಯ ವಿವಿಧ ಸಾಹಿತಿಗಳ ಮನೆಗೆ ಭೇಟಿ ನೀಡುತ್ತಿದ್ದಾರೆ. ಭಾನುವಾರವೂ ಅವರು ಸಾಹಿತಿ ದೇವನೂರು ಮಹಾದೇವ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.
ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೊರೆಸ್ವಾಮಿ, ಭ್ರಷ್ಟಾಚಾರ ರಹಿತವಾದ ಉತ್ತಮ ಆಡಳಿತ ನಡೆಸಿ, ಸರ್ವ ಜನರ ಹಿತ ಕಾಪಾಡುವಂತೆ ಸಲಹೆ ನೀಡಿದ್ದೇನೆ ಎಂದು ಹೇಳಿದರು.
ಮುಖ್ಯಮಂತ್ರಿಗಳಾಗಿ ನಿಯೋಜಿತರಾದವರು ಮಠ ಮಾನ್ಯಗಳಿಗೆ ಭೇಟಿ ನೀಡಿವುದು ವಾಡಿಕೆ, ಆದರೆ, ಸಿದ್ದರಾಮಯ್ಯ ಅಂತಹ ಸಂಪ್ರದಾಯದಿಂದ ದೂರ ಉಳಿದಿದ್ದಾರೆ. ಸಾಹಿತಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಹಲವಾರು ಸಾಹಿತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಾಹಿತಿಗಳ ದಂಡು : ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭಕ್ಕೆ ಅನೇಕ ಸಾಹಿತಿಗಳು ಆಗಮಿಸಲಿದ್ದಾರೆ. ಡಾ. ಸಿಪಿಕೆ, ಡಾ. ಅರವಿಂದ ಮಾಲಗತ್ತಿ, ಡಾ. ಮಳಲಿ ವಸಂತಕುಮಾರ್, ಪ್ರೊ. ಕೆ.ಎಸ್ ಭಗವಾನ್, ಪ್ರೊ. ಹಿ.ಶಿ. ರಾಮಚಂದ್ರೇಗೌಡ, ಡಾ.ಜೆ. ಲಕ್ಕಪ್ಪಗೌಡ, ಪ್ರೊ. ಕಾಳೇಗೌಡ ನಾಗವಾರ, ಪ್ರೊ. ಸಯ್ಯದ್ ಅಖಿಲ್ ಅಹಮದ್, ಪ್ರೊ. ಕಿಕ್ಕೇರಿ ನಾರಾಯಣ್, ಪ್ರೊ. ಮುಜಾಫರ್ ಅಸಾದಿ ಮುಂತಾದವರು ಆಗಮಿಸುವ ನಿರೀಕ್ಷೆ ಇದೆ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications