ಸಿದ್ದು ಪ್ರಮಾಣವಚನಕ್ಕೆ ಸಾಹಿತಿಗಳ ದಂಡು

ಕುಮಾರಕೃಪಾದ ತಮ್ಮ ನಿವಾಸದಿಂದ ಜಯನಗರ ಟಿ ಬ್ಲಾಕ್ ನಲ್ಲಿರುವ ಹೆಚ್.ಎಸ್.ದೊರೆಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಅಧೀಕೃತ ಆಹ್ವಾನ ನೀಡಿದರು.
ಸುಮಾರು ಇಪ್ಪತ್ತು ನಿಮಿಷಗಳ ಕಾಲ ದೊರೆಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಅವರ ಸಲಹೆ ಮತ್ತು ಮಾರ್ಗದಶರ್ನಗಳನ್ನು ಪಡೆದರು. ಶನಿವಾರದಿಂದಲೂ ಸಿದ್ದರಾಮಯ್ಯ ವಿವಿಧ ಸಾಹಿತಿಗಳ ಮನೆಗೆ ಭೇಟಿ ನೀಡುತ್ತಿದ್ದಾರೆ. ಭಾನುವಾರವೂ ಅವರು ಸಾಹಿತಿ ದೇವನೂರು ಮಹಾದೇವ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.
ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದೊರೆಸ್ವಾಮಿ, ಭ್ರಷ್ಟಾಚಾರ ರಹಿತವಾದ ಉತ್ತಮ ಆಡಳಿತ ನಡೆಸಿ, ಸರ್ವ ಜನರ ಹಿತ ಕಾಪಾಡುವಂತೆ ಸಲಹೆ ನೀಡಿದ್ದೇನೆ ಎಂದು ಹೇಳಿದರು.
ಮುಖ್ಯಮಂತ್ರಿಗಳಾಗಿ ನಿಯೋಜಿತರಾದವರು ಮಠ ಮಾನ್ಯಗಳಿಗೆ ಭೇಟಿ ನೀಡಿವುದು ವಾಡಿಕೆ, ಆದರೆ, ಸಿದ್ದರಾಮಯ್ಯ ಅಂತಹ ಸಂಪ್ರದಾಯದಿಂದ ದೂರ ಉಳಿದಿದ್ದಾರೆ. ಸಾಹಿತಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಹಲವಾರು ಸಾಹಿತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಾಹಿತಿಗಳ ದಂಡು : ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭಕ್ಕೆ ಅನೇಕ ಸಾಹಿತಿಗಳು ಆಗಮಿಸಲಿದ್ದಾರೆ. ಡಾ. ಸಿಪಿಕೆ, ಡಾ. ಅರವಿಂದ ಮಾಲಗತ್ತಿ, ಡಾ. ಮಳಲಿ ವಸಂತಕುಮಾರ್, ಪ್ರೊ. ಕೆ.ಎಸ್ ಭಗವಾನ್, ಪ್ರೊ. ಹಿ.ಶಿ. ರಾಮಚಂದ್ರೇಗೌಡ, ಡಾ.ಜೆ. ಲಕ್ಕಪ್ಪಗೌಡ, ಪ್ರೊ. ಕಾಳೇಗೌಡ ನಾಗವಾರ, ಪ್ರೊ. ಸಯ್ಯದ್ ಅಖಿಲ್ ಅಹಮದ್, ಪ್ರೊ. ಕಿಕ್ಕೇರಿ ನಾರಾಯಣ್, ಪ್ರೊ. ಮುಜಾಫರ್ ಅಸಾದಿ ಮುಂತಾದವರು ಆಗಮಿಸುವ ನಿರೀಕ್ಷೆ ಇದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications