ಯಡಿಯೂರಪ್ಪ ಇನ್ನು ಬಿಜೆಪಿಗೆ ವಾಪಸ್ ಬರೋಲ್ಲ

'ಸ್ವಚ್ಛ ಆಡಳಿತ ನೀಡಬೇಕು ಎಂಬ ಬದ್ಧತೆಗೆ ಕಟಿಬದ್ಧರಾಗಿ ಯಡಿಯೂರಪ್ಪ ಅವರ ವಿರುದ್ಧ ನಾವು ನಿರ್ಣಯ ತೆಗೆದುಕೊಂಡೆವು. ಅದು ಯಾವುದೇ ವ್ಯಕ್ತಿಯ ವಿರುದ್ಧ ತೆಗೆದುಕೊಂಡ ನಿರ್ಣಯವಲ್ಲ. ಅಕ್ರಮ ಗಣಿಗಾರಿಕೆ ಕುರಿತಾದ ಲೋಕಾಯುಕ್ತ ವರದಿ ಅದಕ್ಕೆ ಹೇತುವಾಯಿತು' ಎಂದು ನಾಯ್ಡು ಹೇಳಿದರು.
'ಕರ್ನಾಟಕದಲ್ಲಿ ಬಿಜೆಪಿ ಸೋತಿದ್ದಕ್ಕೆ ತನಗೇನೂ ಆಶ್ಚರ್ಯವಾಗಿಲ್ಲ' ಎಂದು ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಅವರು ತಮ್ಮ ಬಲ್ಆಗ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಪ್ರತಿಕ್ರಯಿಸಿದ ವೆಂಕಯ್ಯ ನಾಯ್ಡು, ಹೌದು ನಾವೇನೂ ಕಾಂಗ್ರೆಸ್ಸಿನಂತೆ ಅಲ್ಲ. ದಿಲ್ಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ವಿರುದ್ಧ ಲೋಕಾಯುಕ್ತ ವರದಿ ಬಂದಿದ್ದರೂ ಆ ಪಕ್ಷ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದರೆ ನಾವು ಲೋಕಾಯುಕ್ತ ವರದಿ ವ್ಯತಿರಿಕ್ತವಾಗಿ ಬರುತ್ತಿದ್ದಂತೆ ಅಂದಿನ ಸಿಎಂ ಯಡಿಯೂರಪ್ಪನವರನ್ನು ಕುರ್ಚಿಯಿಂದ ಇಳಿಸಿದೆವು' ಎಂದು ಹೇಳಿದರು.
ಯಡಿಯೂರಪ್ಪನವರ ಕೆಜೆಪಿ ಮೊದಲ ಪ್ರಯತ್ನದಲ್ಲೇ ಶೇ. 10ಕ್ಕೂ ಹೆಚ್ಚು ಮತಗಳಿಸಿಲ್ಲಾ ಎಂಬ ಪ್ರಶ್ನೆಗೆ ಎಚ್ಚರಿಕೆಯಿಂದ ಉತ್ತರಿಸಿದ ನಾಯ್ಡು, ಬಿಜೆಪಿಯ ಪ್ರಮುಖ ಸ್ಪರ್ಧಿ ಕಾಂಗ್ರೆಸ್ ಎಂದಷ್ಟೇ ಹೇಳಿ ಜಾರಿಕೊಂಡರು. ಸಣ್ಣಪುಟ್ಟ ಪಕ್ಷಗಳಿಗೆ ಮತ ಹಾಕುವುರಿಂದ ಕಾಂಗ್ರೆಸ್ಸಿಗೆ ವರವಾಯಿತು ಎಂಬುದನ್ನು ಮತದಾರರು ಅರಿತುಕೊಳ್ಳಬೇಕು ಎಂದೂ ವೆಂಕಯ್ಯ ನಾಯ್ಡು ಇದೇ ವೇಳೆ ಮಾರ್ಮಿಕವಾಗಿ ಹೇಳಿದರು.
ಕರ್ನಾಟಕದಲ್ಲಿ ಯುದ್ಧ ಗೆದ್ದ ಸಂತೋಷದಲ್ಲಿರುವ ಕಾಂಗ್ರೆಸ್ಸಿಗೆ ನಿಜವಾಗಿಯೂ ತಾಕತ್ತಿದ್ದರೆ ಈಗಲೇ ಲೋಕಸಭೆ ಚುನಾವಣೆ ನಡೆಸಲಿದೆ. ಜತೆಗೆ ಇನ್ನು 5 ರಾಜ್ಯಗಳಿಗೆ ಚುನಾವಣೆ ನಡೆಯಬೇಕಿದೆ. ಅದೂ ನಡೆದುಹೋಗಲಿ. ಗೆಲುವು ಯಾರದು? ಜನ ಯಾರ ಪರ ಇದ್ದಾರೆ ಎಂಬುದು ಕಾಂಗ್ರೆಸ್ಸಿಗೆ ಗೊತ್ತಾಗುತ್ತದೆ ಎಂದು ನಾಯ್ಡು ಸವಾಲೆಸೆದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications