ನಕಾರಾತ್ಮಕ ಮತದಾನಕ್ಕೆ ಹೊಸ ವ್ಯವಸ್ಥೆ

ಮತಗಟ್ಟೆಗೆ ಬಂದ ಮತದಾರರು ನಕಾರಾತ್ಮಕ ಮತದಾನ ಮಾಡಲು ಅವಕಾಶ ನೀಡಲು ಮತಯಂತ್ರದಲ್ಲಿಯೇ ಪ್ರತ್ಯೇಕ ಬಟನ್ ಅಳವಡಿಸಲಾಗುತ್ತದೆ. ಈ ವ್ಯವಸ್ಥೆ ಜಾರಿಗೊಳಿಸಲು ಆಯೋಗ ಸಿದ್ಧತೆ ಆರಂಭಿಸಿದೆ.
ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಈ ವ್ಯವಸ್ಥೆ ದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ.
ಮತದಾನದ ವೇಳೆಯಲ್ಲಿ ನಕಾರಾತ್ಮಕ ಮತದಾನಕ್ಕೆ ಅವಕಾಶ ಕಲ್ಪಿಸಬೇಕೆಂದು ಕೋರಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮತಯಂತ್ರ (ಇವಿಎಮ್) ನಲ್ಲಿಯೇ ನಕಾರಾತ್ಮಕ ಮತದಾನಕ್ಕೆ ಅವಕಾಶ ಕಲ್ಪಿಸಲು ಸಾಧ್ಯವೇ ? ವಿವರಣೆ ನೀಡಿ ಎಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.
ಬುಧವಾರ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಕೇಂದ್ರ ಚುನಾವಣಾ ಆಯೋಗ, ಎಲ್ಲಾ ಚುನಾವಣೆಗಳಲ್ಲೂ ನಕಾರಾತ್ಮಕ ಮತ ಚಲಾಯಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ.
ಮತಗಟ್ಟೆಗೆ ಬಂದ ಮತದಾರರು ಫಾರಂ ೧೭ಎ ಪಡೆದು ಯಾವ ಅಭ್ಯರ್ಥಿಗೂ ಮತದಾನ ಮಾಡಲು ಇಷ್ಟವಿಲ್ಲ ಎಂದು ಬರೆದು ಕೊಡಬಹುದು. ಮತಯಂತ್ರದಲ್ಲೇ ನಕಾರಾತ್ಮಕ ಮತದಾನಕ್ಕೆ ಅವಕಾಶ ಕಲ್ಪಿಸಲು ಪ್ರತ್ಯೇಕ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಹೇಳಿದೆ.
ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿರುವುದರಿಂದ ಈ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ಬರುವ ಸಾಧ್ಯತೆ ಇದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವ ಅಭ್ಯರ್ಥಿಯೂ ನಿಮಗೆ ಯೋಗ್ಯ ಎಂದು ಅನ್ನಿಸದಿದ್ದರೆ, ನೀವು ನಕಾರಾತ್ಮಕ ಮತದಾನ ಮಾಡಬಹುದು.
(ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ?)
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು












Click it and Unblock the Notifications