ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್, ಸ್ಪೋಟಕಗಳು ಪತ್ತೆ

ಬೆಂಗಳೂರು ಬಾಂಬ್ ಸ್ಫೋಟದ ತನಿಖೆಯನ್ನು ತೀವ್ರ ಗತಿಯಲ್ಲಿ ಮುಂದುವರೆಸಿರುವ ಬೆಂಗಳೂರು ಪೊಲೀಸರು, ಮಂಗಳವಾರ ಕೊಯಮತ್ತೂರಿನ ಶಂಕಿತ ಉಗ್ರರ ನಿವಾಸಗಳ ಮೇಲೆ ದಾಳಿ ನಡೆಸಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಶಂಕಿತ ಮೂವರು ಉಗ್ರರ ನಿವಾಸಗಳಿಂದ ಪೊಲೀಸರು ಇಪ್ಪತ್ತು ಜಿಲೆಟಿನ್ ಕಡ್ಡಿಗಳು ಮತ್ತು ಹಲವಾರು ಕೆಜಿ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪ್ರಬಲವಾದ ಸ್ಪೋಟ ನಡೆಸಲು ಈ ಸ್ಪೋಟಕಗಳನ್ನು ಸಂಗ್ರಹಿಸಲಾಗಿತ್ತು ಎಂದು ವಿಚಾರಣೆ ವೇಳೆ ಬಂಧಿತರು ಒಪ್ಪಿಕೊಂಡಿದ್ದಾರೆ.
ಒಬ್ಬ ಬಂಧಿತ ಉಗ್ರನ ಜೊತೆ ಕೊಯಮತ್ತೂರಿಗೆ ತೆರಳಿದ್ದ ಬೆಂಗಳೂರು ಪೊಲೀಸರು ಭಾರೀ ಸ್ಪೋಟಗಳ ಸಮೇತ ಬೆಂಗಳೂರಿಗೆ ಮರಳಿದ್ದಾರೆ. ವಿಚಾರಣೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಏ.17ರಂದು ಬಿಜೆಪಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಪೋಟ ನಡೆಸಲು ಯೋಜನೆ ರೂಪಿಸಿದ್ದೇವು. ಆದರೆ, ಸ್ಪೋಟಕಗಳನ್ನು ಸಾಗಿಸಲು ಕೊನೆ ಕ್ಷಣದಲ್ಲಿ ಅಡಚಣೆ ಉಂಟಾಯಿತು. ಆದ್ದರಿಂದ ಇದ್ದಷ್ಟೆ ಸ್ಪೋಟಕ ಬಳಸಿದೆವು ಎಂದು ಬಂಧಿತ ಉಗ್ರರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿಯ ಬಾಂಬ್ ಸ್ಫೋಟದ ತೀವ್ರತೆಯಿಂದಾಗಿ ಹದಿನೇಳು ಮಂದಿ ಗಾಯಗೊಂಡಿದ್ದರು. ಕೆಲವು ಗಾಯಾಳುಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಪ್ರಬಲವಾದ ಸ್ಪೋಟ ನಡೆಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ನಿಜಕ್ಕೂ ಬೆಚ್ಚಿ ಬೀಳಿಸಿದೆ.
ಮತ್ತೊಬ್ಬ ಆರೋಪಿ ಬಂಧನ : ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕುನ್ನಂಕುಳಂನಲ್ಲಿ ಶನಿವಾರ ಬಂಧಿಸಲಾದ ಮತ್ತೊಬ್ಬ ಶಂಕಿತ ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಟ್ಟಾರೆ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಪೊಲೀಸರು ತ್ವರಿತಗತಿಯಲ್ಲಿ ಮುಂದುವರೆಸಿದ್ದಾರೆ. ಸ್ಪೋಟಕ್ಕೆ ಸಂಬಂಧಿಸಿದಂತೆ ಇದುವರೆಗೂ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications