ಫೇಸ್ ಬುಕ್ ನಲ್ಲಿ ಅಂಬೇಡ್ಕರ್ ನಿಂದಿಸಿ ಜೈಲು ಸೇರಿದ

ಬಾಗಲಕೋಟೆಯ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ತೃತೀಯ ಬಿಕಾಂ ವಿದ್ಯಾರ್ಥಿ ಮಂಜುನಾಥ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಏ.14 ರಂದು ಶುಭಾಶಯ ಪ್ರಕಟಿಸಿ, ಅಂಬೇಡ್ಕರ್ ಫೋಟೋ ಹಾಕಿದ್ದರು.
ಫೇಸ್ ಬುಕ್ ನಲ್ಲಿ ಮಂಜುನಾಥ್ ಸ್ನೇಹಿತರಾದ ಪ್ರದೀಪ್ ಏ.28ರಂದು, ಈ ಶುಭಾಶಯ ಸಂದೇಶಕ್ಕೆ ಅವಹೇಳನಕಾರಿ ಕಾಮೆಂಟ್ ಹಾಕಿದ್ದರು. ಅಂಬೇಡ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಲ್ಲದೇ ಮತೀಯ ಭಾವನೆಗೆ ಧಕ್ಕೆ ಬರುವಂತೆ ನಾಲ್ಕು ಸಂದೇಶ ಬರೆದಿದ್ದರು.
ಇದರಿಂದ ಕೆರಳಿದ ಮಂಜುನಾಥ್ ಬಾಗಲಕೋಟೆ ನಗರ ಠಾಣೆಗೆ ಪ್ರದೀಪ್ ವಿರುದ್ಧ ದೂರು ನೀಡಿದ್ದರು. ಪ್ರದೀಪ್ ಫೇಸ್ ಬುಕ್ ಫೋಟೋಗಳು ಮತ್ತು ವೈಯಕ್ತಿಕ ವಿವರಗಳ ಜೆರಾಕ್ಸ್ ಪ್ರತಿಯನ್ನು ದೂರಿನೊಂದಿಗೆ ನೀಡಿದ್ದರು. ಫೇಸ್ ಬುಕ್ ಖಾತೆಯ ವಿವರವನ್ನು ಸಂಗ್ರಹಿಸಿದ ಪೊಲೀಸರು ಪ್ರದೀಪ್ ಬೆಂಗಳೂರಿನವರೆಂದು ಕಂಡು ಹಿಡಿದರು.
ಅಂಬೇಡ್ಕರ್ ವಿರುದ್ಧ ಪ್ರದೀಪ್ ಹಾಕಿದ್ದ ಕಾಮೆಂಟ್ ನ ಪ್ರತಿಯನ್ನು ಪೊಲೀಸರಿಗೆ ದೂರಿನ ಜೊತೆಗೆ ನೀಡಲಾಗಿತ್ತು. ದೂರಿನ ತನಿಖೆ ಆರಂಭಿಸಿದ ಪೊಲೀಸರು ಬೆಂಗಳೂರಿಗೆ ತೆರಳಿ, ಪ್ರದೀಪ್ ನನ್ನು ಬಂಧಿಸಿ, ಬಾಗಲಕೋಟೆಗೆ ಬುಧವಾರ ಸಂಜೆ ಕರೆತಂದಿದ್ದಾರೆ.
ಬುಧವಾರ ಸಂಜೆ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಲಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್ ಹೇಳಿದ್ದಾರೆ.
ಕೇವಲ ನಾಲ್ಕು ದಿನಗಳ ಹಿಂದೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಕೆ.ರೋಸಯ್ಯ ವಿರುದ್ದ ಅವಹೇಳನಕಾರಿ ಕಾಮೆಂಟ್ ಹಾಕಿ, ಹೈದರಾಬಾದ್ ಮೂಲದ ವಕೀಲೆಯೊಬ್ಬರು ಜೈಲು ಸೇರಿದ್ದರು. ಸದ್ಯ ಬೆಂಗಳೂರಿನಗ ಯುವಕನೊಬ್ಬ ಜೈಲು ಸೇರಿದ್ದಾನೆ. (ಮಾಜಿ ಸಿಎಂ ಮೇಲೆ ಕಾಮೆಂಟಿಗೆ ವಕೀಲೆ ಬಂಧನ)
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications