ಫೇಸ್ ಬುಕ್ ನಲ್ಲಿ ಅಂಬೇಡ್ಕರ್ ನಿಂದಿಸಿ ಜೈಲು ಸೇರಿದ

ಬಾಗಲಕೋಟೆಯ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ತೃತೀಯ ಬಿಕಾಂ ವಿದ್ಯಾರ್ಥಿ ಮಂಜುನಾಥ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಏ.14 ರಂದು ಶುಭಾಶಯ ಪ್ರಕಟಿಸಿ, ಅಂಬೇಡ್ಕರ್ ಫೋಟೋ ಹಾಕಿದ್ದರು.
ಫೇಸ್ ಬುಕ್ ನಲ್ಲಿ ಮಂಜುನಾಥ್ ಸ್ನೇಹಿತರಾದ ಪ್ರದೀಪ್ ಏ.28ರಂದು, ಈ ಶುಭಾಶಯ ಸಂದೇಶಕ್ಕೆ ಅವಹೇಳನಕಾರಿ ಕಾಮೆಂಟ್ ಹಾಕಿದ್ದರು. ಅಂಬೇಡ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಲ್ಲದೇ ಮತೀಯ ಭಾವನೆಗೆ ಧಕ್ಕೆ ಬರುವಂತೆ ನಾಲ್ಕು ಸಂದೇಶ ಬರೆದಿದ್ದರು.
ಇದರಿಂದ ಕೆರಳಿದ ಮಂಜುನಾಥ್ ಬಾಗಲಕೋಟೆ ನಗರ ಠಾಣೆಗೆ ಪ್ರದೀಪ್ ವಿರುದ್ಧ ದೂರು ನೀಡಿದ್ದರು. ಪ್ರದೀಪ್ ಫೇಸ್ ಬುಕ್ ಫೋಟೋಗಳು ಮತ್ತು ವೈಯಕ್ತಿಕ ವಿವರಗಳ ಜೆರಾಕ್ಸ್ ಪ್ರತಿಯನ್ನು ದೂರಿನೊಂದಿಗೆ ನೀಡಿದ್ದರು. ಫೇಸ್ ಬುಕ್ ಖಾತೆಯ ವಿವರವನ್ನು ಸಂಗ್ರಹಿಸಿದ ಪೊಲೀಸರು ಪ್ರದೀಪ್ ಬೆಂಗಳೂರಿನವರೆಂದು ಕಂಡು ಹಿಡಿದರು.
ಅಂಬೇಡ್ಕರ್ ವಿರುದ್ಧ ಪ್ರದೀಪ್ ಹಾಕಿದ್ದ ಕಾಮೆಂಟ್ ನ ಪ್ರತಿಯನ್ನು ಪೊಲೀಸರಿಗೆ ದೂರಿನ ಜೊತೆಗೆ ನೀಡಲಾಗಿತ್ತು. ದೂರಿನ ತನಿಖೆ ಆರಂಭಿಸಿದ ಪೊಲೀಸರು ಬೆಂಗಳೂರಿಗೆ ತೆರಳಿ, ಪ್ರದೀಪ್ ನನ್ನು ಬಂಧಿಸಿ, ಬಾಗಲಕೋಟೆಗೆ ಬುಧವಾರ ಸಂಜೆ ಕರೆತಂದಿದ್ದಾರೆ.
ಬುಧವಾರ ಸಂಜೆ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಲಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್ ಹೇಳಿದ್ದಾರೆ.
ಕೇವಲ ನಾಲ್ಕು ದಿನಗಳ ಹಿಂದೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಕೆ.ರೋಸಯ್ಯ ವಿರುದ್ದ ಅವಹೇಳನಕಾರಿ ಕಾಮೆಂಟ್ ಹಾಕಿ, ಹೈದರಾಬಾದ್ ಮೂಲದ ವಕೀಲೆಯೊಬ್ಬರು ಜೈಲು ಸೇರಿದ್ದರು. ಸದ್ಯ ಬೆಂಗಳೂರಿನಗ ಯುವಕನೊಬ್ಬ ಜೈಲು ಸೇರಿದ್ದಾನೆ. (ಮಾಜಿ ಸಿಎಂ ಮೇಲೆ ಕಾಮೆಂಟಿಗೆ ವಕೀಲೆ ಬಂಧನ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications