ಬೆಂಗಳೂರು : 17ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ವೈಟ್ ಪೀಲ್ಡ್ ಬಳಿಯ ಪ್ರೆಸ್ಟೀಜ್ ಶಾಂತಿನಿಕೇತನ ಅಪಾರ್ಟ್ ಮೆಂಟ್ ನಲ್ಲಿ ಸತ್ಯಾರಾಮಚಂದ್ರನ್ (31)ವಾಸವಾಗಿದ್ದರು. ಮೈಕ್ರೋಸಾಫ್ಟ್ ಉದ್ಯೋಗಿಯಾಗಿರುವ ಇವರು, ರಜೆಯ ಮೇಲೆ ತಮಿಳುನಾಡಿಗೆ ತೆರಳಿದ್ದರು. ಬುಧವಾರ ಪತ್ನಿ ಮತ್ತು ಮಕ್ಕಳ ಸಮೇತ ಬೆಂಗಳೂರಿಗೆ ಆಗಮಿಸಿದ್ದರು.
ಬೆಳಗ್ಗೆ ಆರು ಗಂಟೆಯ ಸಂದರ್ಭದಲ್ಲಿ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನ 17ನೇ ಮಹಡಿಯ ಡಿ ಬ್ಲಾಕ್ ನಲ್ಲಿರುವ ಪ್ಲಾಟ್ ಬಾಗಿಲು ತೆರೆಯಲು ಮುಂದಾಗಿದ್ದಾರೆ. ಬಾಗಿಲು ಗಟ್ಟಿಯಾಗಿ ಹಾಕಿಕೊಂಡಿದ್ದು ಸುಲಭವಾಗಿ ತೆರೆದುಕೊಂಡಿಲ್ಲ. ಮತ್ತೊಮ್ಮೆ ಪ್ರಯತ್ನಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಮಗುವನ್ನು ಎತ್ತಿಕೊಂಡಿದ್ದ ರಾಮಚಂದ್ರನ್ ಅವರ ಪತ್ನಿ ದಿವ್ಯಾ ಗಂಡ ಕೆಳಗೆ ಬೀಳುವುದನ್ನು ತಪ್ಪಿಸಲು ವಿಫಲರಾಗಿದ್ದಾರೆ. ಹದಿನೇಳನೆ ಮಹಡಿಯಿಂದ ಕೆಳ ಮಹಡಿಯ ವಾಹನ ನಿಲ್ದಾಣದ ಬಳಿಯ ಕಲ್ಲುಹಾಸಿನ ಮೇಲೆ ಬಿದ್ದ ರಾಮಚಂದ್ರನ್ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಲತಃ ತಮಿಳುನಾಡಿನವರಾದ ರಾಮಚಂದ್ರನ್ ದಿವ್ಯ ಅವರನ್ನು ಆರು ರ್ಷಗಳ ಹಿಂದೆ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ದಿವ್ಯ ವಿವಾಹದ ನಂತರ ಕೆಲಸ ತ್ಯಜಿಸಿದ್ದರು.
ಸ್ಥಳಕ್ಕೆ ಆಗಮಿಸಿದ ವೈಟ್ ಪೀಲ್ಡ್ ಪೊಲೀಸರು ವೈದೇಹಿ ಆಸ್ಪತ್ರಗೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದರು. ಮರಣೋತ್ತರ ಪರೀಕ್ಷೆ ನಂತರ ತಮಿಳುನಾಡಿಗೆ ಮೃತದೇಹವನ್ನು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್ ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications