ಮ್ಯಾಚ್ ಫಿಕ್ಸಿಂಗ್: ಶ್ರೀಶಾಂತ್ ಸೇರಿ ಮೂವರ ಬಂಧನ

ಐಪಿಎಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ ತಂಡದ ಅಜಿತ್ ಚಂಡಿಲಾ, ಅಂಕಿತ್ ಚೌವ್ಹಾಣ್ ಮತ್ತು ಎಸ್.ಶ್ರೀಶಾಂತ್ ಅವರನ್ನು ಇಂದು ಬೆಳಗ್ಗೆ 2.30ರ ಸುಮಾರಿಗೆ ಮುಂಬೈನಲ್ಲಿ ಬಂಧಿಸಲಾಗಿದೆ. ಮುಂಬೈ, ಅಹಮದಾಬಾದ್ ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ ಪೊಲೀಸರು ಆಟಗಾರರನ್ನು ಬಂಧಿಸಿದ್ದಾರೆ.
ಸ್ಪಾಟ್ ಫಿಕ್ಸಿಂಗ್ ಗೆ ಸಹಕರಿಸುತ್ತಿದ್ದ ಏಳುಮಂದಿ ಬುಕ್ಕಿಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿಚಾರಣೆ ನಡೆಸುತ್ತಿರುವ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ತಂಡದ ಆಟಗಾರರ ಬಂಧನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ರಾಜಸ್ಥಾನ್ ರಾಯಲ್ಸ್ ತಂಡದ ಒಡತಿ ಶಿಲ್ಪಾಶೆಟ್ಟಿ ನಿರಾಕರಿಸಿದ್ದಾರೆ.
ಬುಕ್ಕಿಗಳು ಶ್ರೀಶಾಂತ್ ಸೇರಿದಂತೆ ಮೂವರು ಆಟಗಾರರಿಗೆ 40 ಬಾರಿ ದೂರವಾಣಿ ಕರೆ ಮಾಡಿದ್ದಾರೆ ಎಂಬ ಮಾಹಿತಿಗಳು ಪೊಲೀಸರಿಗೆ ಲಭ್ಯವಾಗಿದೆ. ಇನ್ನೂ ಇಬ್ಬರು ಬುಕ್ಕಿಗಳು ತಲೆಮರಿಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಜಸ್ಥಾನ್ ತಂಡದ ಮ್ಯಾನೇಜರ್ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ತನಿಖೆಗೆ ಸಹಕಾರ : ತಂಡದ ಮೂವರು ಆಟಗಾರರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಿರುವ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡ ಮಾಡಿರುವ ರಾಜಸ್ಥಾನ್ ರಾಯಲ್ಸ್ ತಂಡದ ಅಧಿಕಾರಿಗಳು ತನಿಖೆಗೆ ತಂಡದ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದೆ.
ಬಂಧಿತ ಚೌವ್ಹಾಣ್ ಮೊದಲ ಬಾರಿಗೆ ಐಪಿಎಲ್ ಪಂದ್ಯದಲ್ಲಿ ಆಡುತ್ತಿದ್ದರು. ಮುಂಬೈ ಮೂಲದವರಾದ ಚೌವ್ಹಾಣ್ ರನ್ನು ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿತ್ತು.
ಓವರ್ ಗೆ 60 ಲಕ್ಷ : ಸ್ಟಾಟ್ ಫಿಕ್ಸಿಂಗ್ ಹಗರಣದ ಬಗ್ಗೆ ಮಹತ್ವದ ಮಾಹಿತಿ ನೀಡಿರುವ ಪೊಲೀಸರು ಒಂದು ಓವರ್ ಗೆ ಆಟಗಾರರಿಗೆ ಬುಕ್ಕಿಗಳು 60 ಲಕ್ಷ ರೂ. ಹಣ ನೀಡುತ್ತಿದ್ದರು ಎಂದು ಹೇಳಿದ್ದಾರೆ. ಒಂದು ಓವರ್ ನಲ್ಲಿ 20 ರನ್ ನೀಡಿದರೆ ಅಂತಹ ಆಟಗಾರರಿಗೆ 60 ಲಕ್ಷ ಹಣ ನೀಡಲಾಗುತ್ತಿತ್ತು ಎಂದು ಬಂಧಿತ ಬುಕ್ಕಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications