ಮ್ಯಾಚ್ ಫಿಕ್ಸಿಂಗ್: ಶ್ರೀಶಾಂತ್ ಸೇರಿ ಮೂವರ ಬಂಧನ

ಐಪಿಎಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ ತಂಡದ ಅಜಿತ್ ಚಂಡಿಲಾ, ಅಂಕಿತ್ ಚೌವ್ಹಾಣ್ ಮತ್ತು ಎಸ್.ಶ್ರೀಶಾಂತ್ ಅವರನ್ನು ಇಂದು ಬೆಳಗ್ಗೆ 2.30ರ ಸುಮಾರಿಗೆ ಮುಂಬೈನಲ್ಲಿ ಬಂಧಿಸಲಾಗಿದೆ. ಮುಂಬೈ, ಅಹಮದಾಬಾದ್ ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ ಪೊಲೀಸರು ಆಟಗಾರರನ್ನು ಬಂಧಿಸಿದ್ದಾರೆ.
ಸ್ಪಾಟ್ ಫಿಕ್ಸಿಂಗ್ ಗೆ ಸಹಕರಿಸುತ್ತಿದ್ದ ಏಳುಮಂದಿ ಬುಕ್ಕಿಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿಚಾರಣೆ ನಡೆಸುತ್ತಿರುವ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ತಂಡದ ಆಟಗಾರರ ಬಂಧನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ರಾಜಸ್ಥಾನ್ ರಾಯಲ್ಸ್ ತಂಡದ ಒಡತಿ ಶಿಲ್ಪಾಶೆಟ್ಟಿ ನಿರಾಕರಿಸಿದ್ದಾರೆ.
ಬುಕ್ಕಿಗಳು ಶ್ರೀಶಾಂತ್ ಸೇರಿದಂತೆ ಮೂವರು ಆಟಗಾರರಿಗೆ 40 ಬಾರಿ ದೂರವಾಣಿ ಕರೆ ಮಾಡಿದ್ದಾರೆ ಎಂಬ ಮಾಹಿತಿಗಳು ಪೊಲೀಸರಿಗೆ ಲಭ್ಯವಾಗಿದೆ. ಇನ್ನೂ ಇಬ್ಬರು ಬುಕ್ಕಿಗಳು ತಲೆಮರಿಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಜಸ್ಥಾನ್ ತಂಡದ ಮ್ಯಾನೇಜರ್ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ತನಿಖೆಗೆ ಸಹಕಾರ : ತಂಡದ ಮೂವರು ಆಟಗಾರರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಿರುವ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡ ಮಾಡಿರುವ ರಾಜಸ್ಥಾನ್ ರಾಯಲ್ಸ್ ತಂಡದ ಅಧಿಕಾರಿಗಳು ತನಿಖೆಗೆ ತಂಡದ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದೆ.
ಬಂಧಿತ ಚೌವ್ಹಾಣ್ ಮೊದಲ ಬಾರಿಗೆ ಐಪಿಎಲ್ ಪಂದ್ಯದಲ್ಲಿ ಆಡುತ್ತಿದ್ದರು. ಮುಂಬೈ ಮೂಲದವರಾದ ಚೌವ್ಹಾಣ್ ರನ್ನು ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿತ್ತು.
ಓವರ್ ಗೆ 60 ಲಕ್ಷ : ಸ್ಟಾಟ್ ಫಿಕ್ಸಿಂಗ್ ಹಗರಣದ ಬಗ್ಗೆ ಮಹತ್ವದ ಮಾಹಿತಿ ನೀಡಿರುವ ಪೊಲೀಸರು ಒಂದು ಓವರ್ ಗೆ ಆಟಗಾರರಿಗೆ ಬುಕ್ಕಿಗಳು 60 ಲಕ್ಷ ರೂ. ಹಣ ನೀಡುತ್ತಿದ್ದರು ಎಂದು ಹೇಳಿದ್ದಾರೆ. ಒಂದು ಓವರ್ ನಲ್ಲಿ 20 ರನ್ ನೀಡಿದರೆ ಅಂತಹ ಆಟಗಾರರಿಗೆ 60 ಲಕ್ಷ ಹಣ ನೀಡಲಾಗುತ್ತಿತ್ತು ಎಂದು ಬಂಧಿತ ಬುಕ್ಕಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications