ಲಿವಿಂಗ್ ಟುಗೆದರ್ ಸಂಬಂಧ : ಯುವತಿ ನೇಣಿಗೆ

ಬುಧವಾರ ರಾತ್ರಿ ಆಯೇಷಾ (25) ದುಪ್ಪಟದಿಂದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತ ಶ್ರೀಧರ್ ಜೊತೆ ವಾಸಿಸುತ್ತಿದ್ದ ಈಕೆ ಆತ್ಮಹತ್ಯೆ ಮಾಡಿಕೊಳ್ಳುವಾಗ ಮೂರು ತಿಂಗಳ ಗರ್ಭಿಣಿಯಾಗಿದ್ದಳು ಎಂದು ವರ್ತೂರು ಪೊಲೀಸರು ತಿಳಿಸಿದ್ದಾರೆ.
ಶ್ರೀಧರ್ ಜೊತೆ ಲಿವಿಂಗ್ ಟುಗೆದರ್ ಸಂಬಂಧವಿಟ್ಟುಕೊಂಡಿದ್ದ ಆಯೇಷಾ ಆತ್ಮಹತ್ಯೆ ಮಾಡಿಕೊಂಡಿರುವುದು ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವರ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರೇಮ ಪುರಾಣ : ಆಯೇಷಾ ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆಯವಳು ಆರು ವರ್ಷಗಳಹಿಂದೆ ತಂದೆ-ತಾಯಿಯೊಂದಿಗೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆಗೆ ಜಿಮ್ ನಲ್ಲಿ ಶ್ರೀಧರ್ ಪರಿಚಯವಾಗಿದ್ದಾರೆ.
ಪರಿಚಯ ಪ್ರೀತಿಗೆ ತಿರುಗಿದ್ದು, ಇಬ್ಬರೂ ವಿವಾಹವಾಗುವ ಬಗ್ಗೆ ಮನೆಯಲ್ಲಿ ವಿಷಯ ತಿಳಿಸಿದ್ದರು. ಆಯೇಷಾ ತಂದೆ-ತಾಯಿ ವೈಟ್ಫೀಲ್ಡ್ ನಲ್ಲಿ ನೆಲಸಿದ್ದು, ಈಕೆ 2012ರಿಂದ ಕಂಪನಿಗೆ ಓಡಾಡಲು ದೂರವಾಗುತ್ತದೆ ಎಂದು ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.
ಮೃತ ಆಯೇಷಾ ಸ್ನೇಹಿತ ಶ್ರೀಧರ್ ಪ್ರಕಾರ 2012ರ ಜನವರಿಯಿಂದ ಇಬ್ಬರೂ ಜೊತೆಯಲ್ಲಿ ವಾಸಿಸುತ್ತಿದ್ದರು. ಆದರೆ, ಈ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿರಲಿಲ್ಲ. ಕೆಲಸಕ್ಕೆ ಹೋಗುವ ವಿಷಯದ ಬಗ್ಗೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸರಿಗೆ ಶ್ರೀಧರ್ ಹೇಳಿದ್ದಾನೆ.
ಮಂಗಳವಾರವೂ ಕೆಲಸದ ವಿಷಯವಾಗಿ ಚರ್ಚೆಯಾಗಿದೆ. ನಂತರ ಆಯೇಷಾಗೆ ಕೆಲಸಕ್ಕೆ ಹೋಗದೆ ಮನೆಯಲ್ಲಿರಲು ಶ್ರೀಧರ್ ಸೂಚಿಸಿದ್ದಾನೆ. ಇದಕ್ಕೆ ಒಪ್ಪಿದ ಆಕೆ ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮ್ಮ ಮಗಳ ಸಾವಿಗೆ ಶ್ರೀಧರ್ ಕಾರಣ. ಆಕೆಯನ್ನು ಶ್ರೀಧರ್ ಕೊಲೆ ಮಾಡಿದ್ದಾರೆ ಎಂದು ಆಯೇಷಾ ತಾಯಿ ಆರೋಪಿಸಿದ್ದಾರೆ.
ಮತಾಂತರ : ಮೃತ ಆಯೇಷಾ ಅವರ ಗುರುತಿನ ಚೀಟಿ ಮನೆಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ತೇಜಸ್ವಿನಿ ಎಂಬ ಹೆಸರಿದೆ. ಅದೇ ಹೆಸರಿನಲ್ಲಿ ಆಕೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ. ಆದ್ದರಿಂದ, ಆಕೆ ಮತಾಂತರಗೊಂಡಿದ್ದರೇ ಎಂಬ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಹ ನಟಿ : ಮೃತ ಆಯೇಷಾ ಐಶ್ವರ್ಯಾ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರಕರಣದಲ್ಲಿ ಹಲವು ಗೊಂದಲಗಳಿದ್ದು, ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications