ಬಿಜೆಪಿಯಿಂದ ಎಂಎಲ್ ಸಿ ಲೆಹರ್ ಸಿಂಗ್ ಉಚ್ಚಾಟನೆ

ರಾಜ್ಯ ಬಿಜೆಪಿ ಖಜಾಂಚಿಯೂ ಆಗಿರುವ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಅಡ್ವಾಣಿ ನಡವಳಿಕೆ ಹಾಗೂ ಮನೋಭಾವವನ್ನೇ ಪ್ರಶ್ನಿಸಿದ್ದರು. ಈ ಹಿಂದೆ ಕೂಡಾ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ಪರ ಮಾತುಗಳನ್ನಾಡಿ, ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು. ಬಿಎಸ್ ಯಡಿಯೂರಪ್ಪ, ನರೇಂದ್ರ ಮೋದಿ, ಕಲ್ಯಾಣ್ ಸಿಂಗ್, ವಸುಂಧರಾ ರಾಜೆ ಅವರಂಥ ಜನಪ್ರಿಯ ನಾಯಕರನ್ನು ಹೈಕಮಾಂಡ್ ನಿರ್ಲಕ್ಷಿಸಿ ಕಾಟ ಕೊಡುತ್ತಿರುತ್ತದೆ ಎಂದು ಲೆಹರ್ ಸಿಂಗ್ ಹೇಳಿದ್ದರು.
ಅಡ್ವಾಣಿಗೆ ಸವಾಲು: ರಾಜ್ಯದಲ್ಲಿ ಪಕ್ಷದ ಹಿನ್ನಡೆಗೆ ನಿಮ್ಮ ಕೊಡುಗೆಯೂ ಇದೆ. ರಾಜಿಯಾಗದ ನಿಮ್ಮ ಈಗಿನ ಮನೋಭಾವ ಮೊದಲೇ ಇದ್ದಿದ್ದರೆ ರಾಜ್ಯದಲ್ಲಿ ಪಕ್ಷ ಇವತ್ತು ಈ ದಯನೀಯ ಸ್ಥಿತಿಗೆ ತಲುಪುತ್ತಿರಲಿಲ್ಲ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಹುಮತ ಗಳಿಸುವುದಕ್ಕಾಗಿ ಆಪರೇಷನ್ ಕಮಲ ನಡೆಸಲಾಯಿತು. ಆಗ ನೀವು ಯಡಿಯೂರಪ್ಪ ಅವರನ್ನು ಪ್ರಶ್ನಿಸದೆ ಮೌನವಾಗಿದ್ದಿರಿ. ನಿಮ್ಮ ಯಾತ್ರೆಗಳಿಗೆ ಹಣ ಎಲ್ಲಿಂದ ಹರಿದು ಬಂತು ಎಂಬುದನ್ನು ಕೇಳಿದ್ದೀರಾ ಎಂದು ಲೆಹರ್ ಸಿಂಗ್ ಖಾರವಾಗಿ ಪ್ರಶ್ನಿಸಿದ್ದರು.
ಅಡ್ವಾಣಿಗೆ ಬರೆದಿರುವ ಗುಪ್ತ ಪತ್ರದಲ್ಲಿ ಒಟ್ಟು 13 ಅಂಶಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಈ ಬಗ್ಗೆ ಸ್ಪಷ್ಟೀಕರಣ ನೀಡುವಂತೆಯೂ ಆಗ್ರಹಿಸಿದ್ದರು.ಕರ್ನಾಟಕದ ಭ್ರಷ್ಟಾಚಾರವನ್ನು ಪದೇ ಪದೇ ಪ್ರಸ್ತಾಪಿಸುವ ನೀವು ಜಾರ್ಖಂಡ್ ರಾಜ್ಯದಲ್ಲಿ ಶಿಬು ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದರ ಬಗ್ಗೆ ಚಕಾರ ಎತ್ತಲಿಲ್ಲ ಏಕೆ? ಮೈನಿಂಗ್ ಮಾಫಿಯಾ ಜತೆ ಸುಷ್ಮಾ ಸ್ವರಾಜ್ ಸಂಬಂಧ ಹೊಂದಿರುವ ಬಗ್ಗೆ ಪ್ರಶ್ನಿಸಿದ್ದಿರಾ? ನಿತಿನ್ ಗಡ್ಕರಿ ಭ್ರಷ್ಟಾಚಾರದ ಬಗ್ಗೆ ನಿಮ್ಮ ನಿಲುವೇನು? ಪ್ರಧಾನಿಯಾಗುವ ನಿಮ್ಮ ಕನಸಿಗೆ ಹಣ ಸುರಿದವರು ಯಾರು? ಹೀಗೆ ಅಡ್ವಾಣಿ ಅವರಿಗೆ ನೇರ ಪ್ರಶ್ನೆಗಳನ್ನು ಹಾಕಿದ್ದಲ್ಲದೆ ಸ್ಪಷ್ಟೀಕರಣ ನೀಡುವ ಸಮಯ ಸ್ಥಳ ಹೇಳಿದರೆ ನಾವು ಬಂದು ನಿಮ್ಮನ್ನು ಭೇಟಿ ಮಾಡುತ್ತೇವೆ ಎಂದು ಮನವಿ ಸಲ್ಲಿಸಿದ್ದರು.
ಲೆಹರ್ ಸಿಂಗ್ ವರ್ತನೆ ಉದ್ದಟತನದಿಂದ ಕೂಡಿದ್ದು ಎಂದು ಪರಿಗಣಿಸಿರುವ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಲೆಹರ್ ಸಿಂಗ್ ಅವರು ಯಡಿಯೂರಪ್ಪ ಅವರ ಆಪ್ತರಾಗಿದ್ದರು ಕರ್ನಾಟಕ ಜನತಾ ಪಕ್ಷದಿಂದ ದೂರವೇ ಉಳಿದಿದ್ದರು. ಸದಾನಂದ ಗೌಡರ ಸಂಪುಟ ವಿಸ್ತರಣೆ ವೇಳೆ ಅಲ್ಪಸಂಖ್ಯಾತರನ್ನು ಬಿಟ್ಟು ಲೆಹರ್ ಸಿಂಗ್ ಗೆ ಮಣೆ ಹಾಕುವಂತೆ ಯಡಿಯೂರಪ್ಪ ಒತ್ತಾಯಿಸಿದ್ದರು ಎಂಬ ಮಾತಿದೆ. ಈಗ ಯಡಿಯೂರಪ್ಪ ಅವರ ಬೆನ್ನ ಹಿಂದೆ ಲೆಹರ್ ಸಿಂಗ್ ನಿಲ್ಲುತ್ತಾರಾ? ಕಾದು ನೋಡಬೇಕಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications