ಇತ್ತ ನೀರಿಗೆ ಹಾಹಾಕಾರ:ಅತ್ತ ಜಯಾ ಮತ್ತದೇ ರಾಗ
ಚೆನ್ನೈ, ಮೇ 18: ಕಾವೇರಿ ನದಿ ನೀರನ್ನೇ ನಂಬಿಕೊಂಡಿರುವ ನಾಲ್ಕು ಜಿಲ್ಲೆಗಳಾದ ಬೆಂಗಳೂರು, ಮಂಡ್ಯ, ಮೈಸೂರು ಮತ್ತು ಹಾಸನದಲ್ಲಿ ನೀರಿಗೆ ಅಕ್ಷರಸ: ಹಾಹಾಕಾರ ಉಂಟಾಗಿದ್ದರೆ ಅತ್ತ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತೆ ಕ್ಯಾತೆ ತೆಗೆದಿದ್ದಾರೆ.
KRS ಮತ್ತು ಹೇಮಾವತಿ ಜಲಾಶಯ ಖಾಲಿ ಖಾಲಿಯಾಗಿದ್ದರೆ ಅತ್ತ ಜಯಲಲಿತಾ ಕಾವೇರಿ ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.
ತಮಿಳುನಾಡು ರೈತರಿಗೆ ಕರ್ನಾಟಕದಿಂದ ದಶಕಗಳಿಂದ ಅನ್ಯಾಯವಾಗುತ್ತಲೇ ಇದೆ. ದೀರ್ಘಕಾಲಿಕ ನ್ಯಾಯಕ್ಕಾಗಿ ತಮಿಳುನಾಡಿನ ಲಕ್ಷಾಂತರ ರೈತರು ಇನ್ನಷ್ಟು ಕಾಯಲು ಸಿದ್ದರಿಲ್ಲ.

ಕಾವೇರಿ ಪ್ರದೇಶದ ನಮ್ಮ ರೈತರನ್ನು ರಕ್ಷಿಸಬೇಕೆಂದರೆ ಅದಕ್ಕೆ ಇರುವ ಪರಿಹಾರವೆಂದರೆ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪಿಸುವುದು.
ಈ ಕೂಡಲೇ ಕೇಂದ್ರ ಸರಕಾರ ಮಂಡಳಿ ಸ್ಥಾಪಿಸಿ ನಮ್ಮ ರೈತರಿಗೆ ನ್ಯಾಯ ಕೊಡಿಸಿ ಎಂದು ಜಯಲಲಿತಾ ಪ್ರಧಾನಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಈ ಮಧ್ಯೆ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸರಕಾರ ಮೇ ಹತ್ತರಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ.
ಜಲಮಂಡಳಿ ತುರ್ತು ಸಭೆ: ನೀರಿನ ಸಮಸ್ಯೆ ಉಲ್ಭಣಿಸುತ್ತಿದ್ದಂತೆಯೇ ಜಲಸಂಪನ್ಮೂಲ ಇಲಾಖೆ ಮತ್ತು ಬೆಂಗಳೂರು ಜಲಮಂಡಳಿಯ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಮುಖಂಡತ್ವದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಲಭ್ಯವಿರುವ ನೀರಿನಲ್ಲಿ 'ಸಂಕಷ್ಟ ಸೂತ್ರ'ದಡಿಯಲಿ ಪರಿಸ್ಥಿತಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ.
ಸಂಕಷ್ಟ ಸೂತ್ರ ಅಂದರೇನು? ಲಭ್ಯವಿರುವ ನೀರಿನ ಆಧಾರದ ಮೇಲೆ ಬೆಂಗಳೂರು, ಮಂಡ್ಯ, ಮೈಸೂರು ಮತ್ತು ಹಾಸನದಲ್ಲಿ ಸೀಮಿತ ಅವಧಿಯಲ್ಲಿ ಮಾತ್ರ ನೀರು ಪೂರೈಕೆ ಮಾಡುವುದು.
ಎರಡು ದಿನಕ್ಕೊಮ್ಮೆ ನೀರಿನ ಬದಲು 3-4 ದಿನಕ್ಕೊಮ್ಮೆಯಂತೆ ನೀರು ಪೂರೈಸುವುದು. ಜಲಮಂಡಳಿ ಪೂರೈಸುವ ನೀರನ್ನು ಕುಡಿಯಲು ಮಾತ್ರ ಬಳಸುವುದು.
ಬಟ್ಟೆ ಒಗೆಯಲು, ವಾಹನ ತೊಳೆಯಲು ಮತ್ತು ಇತರ ಕೆಲಸಗಳಿಗೆ ಬಳಸದಂತೆ ಸಾರ್ವಜನಿಕರಿಗೆ ಸೂಚನೆ ನೀಡಿ ಜಾಗೃತಿ ಮೂಡಿಸುವುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications