'ನೋಡ್ತಿರಿ ಅವ್ರು ಕಾಂಗ್ರೆಸ್ ಬೆನ್ನಿಗೂ ಚೂರಿ ಹಾಕ್ತಾರೆ'

ಹಾಗೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿ ಈ ಹಿಂದೆ ತಾವಿದ್ದ ಪಕ್ಷಗಳಿಗೂ ಟೋಪಿ ಹಾಕಿದ್ದರು ಎಂದು ಹೇಳುತ್ತಿದ್ದಂತೆ ನಿಸ್ಸಂಶಯವಾಗಿ ಅದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹಿಂದಿನ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿರುವ ಮಾತು ಎಂಬುದು ಯಾರಿಗೇ ಆಗಲಿ ವೇದ್ಯವಾಗುತ್ತದೆ.
ಹೌದು, ಬಿಜೆಪಿ-ಜೆಡಿಎಸ್ ಪಾರ್ಟಿ ಫಾರ್ಟಿ-ಫಾರ್ಟಿ ಆಗುತ್ತಿದ್ದಂತೆ, ಬಿಜೆಪಿ ಅಭ್ಯರ್ಥಿಯ ಅಕಾಲಿಕ ಸಾವು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ (ಮೇ 28ರಂದು) ಎಲ್ಲಿಲ್ಲದ ಮಹತ್ವವನ್ನು ತಂದಿತ್ತಿದೆ. ಆದರೆ ಪಿರಿಯಾಪಟ್ಟಣ ಚುನಾವಣೆಯನ್ನು ಗೆದ್ದುಕೊಂಡು ಸಿದ್ದರಾಮಯ್ಯ ಅವರನ್ನು ನೇರಾನೇರ ಹಣಿಯಲು ಹವಣಿಸುತ್ತಿರುವ ಕುಮಾರಸ್ವಾಮಿ ಅವರು ಸಿಎಂ ಸಿದ್ದು ಅವರ ಚರಿತ್ರೆಯನ್ನು ಪಟ್ಟಣದ ಮತದಾರರ ಮುಂದೆ ಬಿಚ್ಚಿಟ್ಟಿದ್ದಾರೆ.
'ಅವಯ್ಯ ಗೊತ್ತಲ್ಲ. ಈ ಹಿಂದೆ ತನ್ನ ಪೋಷಿಸಿ, ಪೊರೆದ ಪಕ್ಷಗಳಿಗೇ ಪಂಗನಾಮ ಹಾಕಿರುವವನು. ಅಂತಹುದರಲ್ಲಿ ಈಗ ಕಾಂಗ್ರೆಸ್ ಪಕ್ಷದ ವತಿಯಿಂದ ಮುಖ್ಯಮಂತ್ರಿಯೇ ಆಗಿಬಿಟ್ಟಿದ್ದಾರೆ. ಆದರೆ, ಅವರು ಕೈ ಪಕ್ಷದ ಬೆನ್ನಿಗೆ ಚೂರಿ ಹಾಕುವ ಖಾತರಿ ನನಗಿದೆ. ನೀವು ಕಾದು ನೋಡಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರೆತ್ತದೆ ಕುಮಾರಸ್ವಾಮಿ ತಮ್ಮ ಹೃದಯದಲ್ಲಿ ಮಡುಗಟ್ಟಿದ್ದ ದುಃಖವನ್ನು ಹೊರಹಾಕಿದ್ದಾರೆ.
ಆದರೆ, ಯಾರ ವಿರುದ್ಧವೇ ಆಗಲಿ ತೊಡೆತಟ್ಟುವುದರಲ್ಲಿ ಸಿದ್ಧಹಸ್ತರಾದ ಸಿದ್ದು ಮೇ 28ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ವೆಂಕಟೇಶ್ ಪರ ಮತಯಾಚಿಸಲು ಇಂದು ಪಿರಿಯಾಪಟ್ಟಣಕ್ಕೆ ಭೇಟಿ ನೀಡುತ್ತಿದ್ದಾರೆ. ಆಗ ಮತದಾರರ ಸಮ್ಮುಖದಲ್ಲಿ ಕುಮಾರಸ್ವಾಮಿಗೆ ಹೇಗೆ ತಿರುಗೇಟು ನೀಡುತ್ತಾರೋ ಕಾದುನೋಡಬಹುದು.
ಖರ್ಗೆ ಸಿಎಂ ಆಗದೇ ಇದ್ದುದಕ್ಕೆ ತಮ್ಮದೇ ಶೈಲಿಯಲ್ಲಿ ಕುಟುಕಿದ ಕುಮಾರಸ್ವಾಮಿ, ಕಾಂಗ್ರೆಸ್ಸಿನಲ್ಲಿ ಹಿರಿಯ, ನಿಷ್ಟಾವಂತ ದಲಿತ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದನ್ನು ಆ ಪಕ್ಷದ ಮುಖಂಡರೇ ವ್ಯವಸ್ಥಿತವಾಗಿ ತಡೆದರು. ಆದರೆ ಕಾಂಗ್ರೆಸ್ಸಿಗೆ ಅವರೇ ಅಂತಿಮ ಚರಣ ಹಾಡಲಿದ್ದಾರೆ ಎಂದು ಎಚ್ಚರಿಸಿದರು.
ತಮ್ಮ ಪಕ್ಷದ ಅಭ್ಯರ್ಥಿ ಕೆ ಮಹದೇವ್ ಪರ ಚುನಾವಣಾ ಪ್ರಚಾರ ನಡೆಸಿದ ಕುಮಾರಸ್ವಾಮಿ, ಮದ್ಯದ ದೊರೆಗಳು ಚುನಾವಣಾ ವೆಚ್ಚಕ್ಕೆ ಹಣದ ಹೊಳೆ ಹರಿಸಿದ್ದರಿಂದ ಅಗ್ಗದ ದರದಲ್ಲಿ ಮದ್ಯ ಮಾರಾಟ ಮಾಡಲು ಸರಕಾರ ಮುಂದಾಗಿದೆ. ಇದು ಸರಕಾರದ ಜನವಿರೋಧಿ ನೀತಿಯನ್ನು ಎತ್ತಿತೋರಿಸುತ್ತದೆ ಎಂದು ಆರೋಪಿಸಿದರು.
ಜೆಡಿಎಸ್ನ ಐದು ವಾಹನಗಳ ವಶ: ಈ ಮಧ್ಯೆ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅನುಮತಿ ಪಡೆಯದೆ ಉಪಯೋಗಿಸುತ್ತಿದ್ದ ಐದು ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಬಸವರಾಜ್ ತಿಳಿಸಿದ್ದಾರೆ. ಪೋರ್ಡ್ ಐಕಾನ್, ಟಾಟಾ ಇಂಡಿಕಾ, ಮಾರುತಿ ಸುಝುಕಿ, ಶೆವರ್ಲೆ, ಟೊಯೋಟಾ ಕ್ವಾಲಿಸ್ ವಾಹನಗಳನ್ನು ವಶಪಡಿಸಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಬಸವರಾಜ್ ತಿಳಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications