ಅಡ್ವಾಣಿ ಭಾನುವಾರ ಬೆಂಗಳೂರಿಗೆ ಬಂದಿದ್ದು ಯಾಕೆ?
ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಲ್ಲಿಗೆ ಬಂದಿದ್ದ ಅಡ್ವಾಣಿಯವರು, ಕರ್ನಾಟಕದಲ್ಲಿ ಸೋತ ಬಿಜೆಪಿಯ ಬಗ್ಗೆ, ಲೆಹರ್ ಸಿಂಗ್ ಅವರು ಮಾಡಿರುವ ಹಲವಾರು ಗಂಭೀರ ಆರೋಪಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿ ಪತ್ರಕರ್ತರನ್ನು ನಿರಾಶೆಗೊಳಿಸಿದರು.
8ನೇ ಶತಮಾನದಲ್ಲಿ ಅದ್ವೈತ ಸಿದ್ಧಾಂತವನ್ನು ಪ್ರಪಂಚದುದ್ದಕ್ಕೂ ಪಸರಿಸಿದ ಆಧ್ಯಾತ್ಮ ಗುರು ಆದಿ ಶಂಕರಾಚಾರ್ಯರ ಸಂದೇಶವನ್ನು ಸಾರಲು ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ಸಂಸ್ಥೆ ಆಯೋಜಿಸಲಾಗಿದ್ದ 'ಆನಂದ ಸಿಂಧು' ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಕೂಡ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅಡ್ವಾಣಿ ಅವರು, ಜಾತಿ, ಪಂಗಡ, ಉಚ್ಚನೀಚಗಳ ಪರಿಧಿಯನ್ನು ಮೀರಿ ಜನರನ್ನು ಒಗ್ಗೂಡಿಸುವಲ್ಲಿ ಆಧ್ಯಾತ್ಮ ಜಾಗತಿಕವಾಗಿ ಪ್ರಮುಖ ಪಾತ್ರವಹಿಸಿದೆ. ಆದಿ ಶಂಕರರ ಸಂದೇಶ ಮನುಕುಲವನ್ನು ಒಂದು ಮಾಡುತ್ತದೆ ಎಂದರು. ಕಾರ್ಯಕ್ರಮದ ನಂತರ ಸಂಜೆಯೇ ಅವರು ದೆಹಲಿಗೆ ತೆರಳಿದರು.