ಸಚಿವ ಸ್ಥಾನ : ದೆಹಲಿ ತಲುಪಿದ ಪರಿಷತ್ ಸದಸ್ಯರು

ವಿಧಾನಪರಿಷತ್ ಸದಸ್ಯರಾದ ಮೋಟಮ್ಮ, ವೀರಣ್ಣ ಮತ್ತಿಕಟ್ಟಿ, ಕೆ.ಬಿ.ಕೋಳಿವಾಡ ಮುಂತಾದವರು ಈಗಾಗಲೇ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ಹೈ ಕಮಾಂಡ್ ನಾಯಕರ ಭೇಟಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರೀ ಹೊರ ರಾಜ್ಯಗಳ ಪ್ರವಾಸದಲ್ಲಿದ್ದು, ಇಂದು ಸಂಜೆ ಆಗಮಿಸುವ ಸಾಧ್ಯತೆ ಇದೆ.
ಉಭಯ ನಾಯಕರು ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಬಿ.ಕೋಳಿವಾಡ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವಂತೆ ನಾವು ಹೈ ಕಮಾಂಡ್ ನಾಯಕರಿಗೆ ಮನವಿ ಮಾಡಲಿದ್ದೇವೆ ಎಂದು ಹೇಳಿದರು.
ಹೈ ಕಮಾಂಡ್ ನಾಯಕರನ್ನು ಭೇಟಿಯಾಗುವ ಮೊದಲು ಈ ನಾಯಕರು ಮಧುಸೂದನ್ ಮಿಸ್ತ್ರೀ ಅವರನ್ನು ಭೇಟಿಯಾಗಬೇಕು. ಆದರೆ, ಗುಜರಾತ್ ಪ್ರವಾಸದಲ್ಲಿರುವ ಮಿಸ್ತ್ರೀ ಇಂದು ಸಂಜೆ ದೆಹಲಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ನಾಯಕರು ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಹೈಕಮಾಂಡ್ ನಾಯಕರು ಸ್ಪಷ್ಟಪಡಿಸಿದ್ದರು. ಇದರಿಂದ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಮೋಟಮ್ಮ, ವೀರಣ್ಣ ಮತ್ತೀಕಟ್ಟಿ ಮುಂತಾದವರಿಗೆ ನಿರಾಸೆ ಉಂಟಾಗಿತ್ತು. (ತಪ್ಪಿದ ಸಚಿವ ಸ್ಥಾನ, ಪರಿಷತ್ ಸದಸ್ಯರು ಗರಂ)
ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಇವರು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಸಂಪುಟ ರಚನೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳು ನಿರ್ಧಾರವರನ್ನು ಸಿಎಂ ಸಿದ್ದರಾಮಯ್ಯ ಹೆಗಲಿಗೆ ರಾಷ್ಟ್ರೀಯ ನಾಯಕರು ಒಪ್ಪಿಸಿದ್ದಾರೆ.
ಆದ್ದರಿಂದ ಪರಿಷತ್ ಸದಸ್ಯರ ದೆಹಲಿ ಭೇಟಿ ಅಷ್ಟು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ವಿಶ್ಲೇಷಿಸಲಾಗುತ್ತಿದೆ. ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾದರೂ, ಕೇವಲ ಮನವಿ ಸಲ್ಲಿಸಿ ಮರಳಬಹುದಷ್ಟೇ. ಮುಂದೆ ಅವಕಾಶ ನೀಡುತ್ತೇವೆ ಎಂಬ ಭರವಸೆ ನಾಯಕರಿಂದ ದೊರೆಯಬಹುದು.(ನೂತನ ಸಚಿವರ ಪಟ್ಟಿ)
ಪ್ರಸ್ತುತ 28 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡು ಖಾತೆ ಹಂಚಿಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯಕ್ಕೆ ಸಂಪುಟ ವಿಸ್ತರಣೆ ಕೆಲಸಕ್ಕೆ ಕೈ ಹಾಕುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಪರಿಷತ್ ಸದಸ್ಯರು ಮುಂದಿನ ಸಂಪುಟ ವಿಸ್ತರಣೆವರೆಗೆ ಕಾಯಬೇಕಾಗಿರುವುದು ಅನಿವಾರ್ಯ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications