ಅರ್ಹತೆಯಿಲ್ಲದ ಶಿಕ್ಷಕರ ನೇಮಕ ಬೇಡ : ಸುಪ್ರೀಂ

ಸೋಮವಾರ ಗುಜರಾತ್ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 'ಸಹಾಯಕ ಶಿಕ್ಷಕ'ರ ನೇಮಕಾತಿ ಕುರಿತ ಪ್ರಕರಣವೊಂದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ಬಿ.ಎಸ್.ಚೌಹಾಣ್ ಮತ್ತು ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಮಾನದಂಡವಿಲ್ಲದೇ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು ಆಘಾತಕಾರಿ ಎಂದು ಅಭಿಪ್ರಾಯಪಟ್ಟಿತು.
ಶಿಕ್ಷಕರಿಗೆ ಶೈಕ್ಷಣಿಕ ಅರ್ಹತೆಯಿರಬೇಕು. ಅವರು ಮಾಡುವ ಬೋಧನೆ ಭವಿಷ್ಯದ ದೇಶದ ಪ್ರಜೆಗಳ ಮೇಲೆ ಪರಿಣಾಮ ಬೀರಬೇಕು. ಆದರೆ, ಅರ್ಹತೆ ಇಲ್ಲದವರನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯದ ಜೊತೆ ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿದೆ ಎಂದು ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿತು.
ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿಇ)ಯನ್ನು ಎಲ್ಲಾ ರಾಜ್ಯಗಳು ಕಡ್ಡಾಯವಾಗಿ ಜಾರಿಗೆ ತಂದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವಂತೆ ನೋಡಿಕೊಳ್ಳಬೇಕು. ಖಾಸಗಿಯಾಗಿ ಅನರ್ಹತೆ ಹೊಂದಿರದ ಶಿಕ್ಷಕರನ್ನು ನೇಮಿಸಿಕೊಳ್ಳಬಾರದು ಎಂದು ಕೋರ್ಟ್ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅರ್ಹತೆ ಇಲ್ಲದ ಶಿಕ್ಷಕನ್ನು ನೇಮಿಸಿಕೊಂಡು ಮಕ್ಕಳಿಗೆ ಬೋಧನೆ ಮಾಡಿಸುತ್ತಿವೆ. ನಂತರ ಈ ಶಿಕ್ಷಕರಿಗೆ ಸರಿಯಾಗಿ ವೇತನ ಪಾವತಿಸುತ್ತಿಲ್ಲ ಎಂದು ರಾಜ್ಯ ಸರ್ಕಾರಗಳ ಕ್ರಮಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಅನರ್ಹ ಶಿಕ್ಷಕರ ನೇಮಕ ಹಾಗೂ ಅರ್ಹತೆಗೆ ಸಂಬಂಧಿಸಿದ ಪೂರ್ಣ ವಿವರಗಳನ್ನು ಒಪ್ಪಿಸುವಂತೆ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಆದೇಶ ನೀಡಿದೆ. ಸಾಮಾನ್ಯ ಶಿಕ್ಷಕರಿಗಿಂತ ಕಾಲು ಭಾಗದಷ್ಟು ವೇತನ ಪಡೆಯುವ ಈ 'ಸಹಾಯಕ ಶಿಕ್ಷಕರನ್ನು' ಹಲವು ರಾಜ್ಯಗಳಲ್ಲಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಸರ್ಕಾರಗಳ ಈ ಕ್ರಮದಿಂದ ಶಿಕ್ಷಣ ವ್ಯವಸ್ಥೆಯ ಮೌಲ್ಯ ಕುಸಿಯುತ್ತಿದೆ ಎಂದಿರುವ ನ್ಯಾಯಾಲಯ, ಸಹಾಯಕ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೊದಲು ಅವರಿಗೆ ಮಕ್ಕಳಿಗೆ ಬೋಧಿಸುವ ಸಾಮರ್ಥ್ಯವಿದೆಯೇ ಎಂದು ಪರೀಕ್ಷಿಸಿ ನೇಮಿಸಿಕೊಳ್ಳಬೇಕು ಎಂದು ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications