ಕೆಜೆಪಿ ಪಕ್ಷದ ಚಿಹ್ನೆ ಬದಲಾವಣೆ ಮಾಡಲು ಚಿಂತನೆ

ಹಾವೇರಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಉದಾಸಿ, ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷದ ಚಿಹ್ನೆ ಗುರುತಿಸಲು ಮತದಾರರು ವಿಫಲರಾದರು. ಆದ್ದರಿಂದ ಪಕ್ಷ ಸೋಲು ಅನುಭವಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಪಕ್ಷದ ಚಿಹ್ನೆ ಬದಲಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
ಪಕ್ಷ ಪ್ರಾರಂಭವಾದ ಅಲ್ಪ ಅವಧಿಯಲ್ಲೇ ಜನರ ಗಮನ ಸೆಳೆಯುವಂತಹ ಚಿಹ್ನೆ ಪಡೆಯಲು ನಾವು ವಿಫಲವಾದೆವು. ಸಮಯಾವಕಾಶದ ಕೊತರೆ ಇತ್ತು. ತಕ್ಷಣ ಚುನಾವಣೆ ಎದುರಾಗಿದ್ದರಿಂದ ಕೇಂದ್ರ ಚುನಾವಣಾ ಆಯೋಗ ನೀಡಿದ ಚಿಹ್ನೆಯ ಮೂಲಕವೇ ಚುನಾವಣೆ ಎದುರಿಸಿದೆವು. (ಕೆಜೆಪಿ ತೆಂಗಿನಕಾಯಿ ಚಿಹ್ನೆ ಕಾಯಂ)
ಪಕ್ಷದ ತೆಂಗಿನಕಾಯಿ ಚಿಹ್ನೆಯನ್ನು ಜನರು ಸರಿಯಾಗಿ ಗುರುತಿಸಿಲ್ಲ. ಆದ್ದರಿಂದ ವಿಧಾನಸಭೆ ಚುಣಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ಸದ್ಯ ಪಕ್ಷದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಪಕ್ಷದ ಚಿಹ್ನೆ ಬದಲಾವಣೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಅವರು ಹೇಳಿದರು.
ಶೀಘ್ರದಲ್ಲೇ ಕೆಜೆಪಿ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಪಕ್ಷ ಚಿಹ್ನೆ ಬದಲಾವಣೆ ಮಾಡುವ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರತ ಬರೆದು ಪಕ್ಷದ ಚಿಹ್ನೆ ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಮೊದಲೇ ಇತ್ತು : ಕೆಜೆಪಿ ಪಕ್ಷ ಮೊಲದೇ ಸೈಕಲ್ ಅಥವ ನೇಗಿಲಯೋಗಿ ಚಿಹ್ನೆ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆದರೆ, ಇವೆರೆಡೂ ಚಿಹ್ನೆಯನ್ನು ಬೇರೆ ಪಕ್ಷಗಳಿಗೆ ಹಂಚಿಕೆ ಮಾಡಿದ್ದರಿಂದ ಆಯೋಗ, ತೆಂಗಿನ ಕಾಯಿ ಚಿಹ್ನೆ ನೀಡಿತ್ತು.
ಚುನಾವಣೆ ಹೊಸ್ತಿಲಲ್ಲಿ ಇದ್ದ ಕಾರಣ ಒಲ್ಲದ ಮನಸ್ಸಿನಿಂದಲೇ ಯಡಿಯೂರಪ್ಪ ತೆಂಗಿನಕಾಯಿ ಚಿಹ್ನೆ ಒಪ್ಪಿಕೊಂಡಿದ್ದರು. ವಿಧಾನಸಭೆ ಚುನಾವಣೆಗೂ ಪಕ್ಷದ ಅಭ್ಯರ್ಥಿಗಳನ್ನು ಅದೇ ಚಿಹ್ನೆಯ ಮೂಲಕ ಕಣಕ್ಕೆ ಇಳಿಸಿದ್ದರು. ಚುನಾವಣೆ ಮುಗಿದಿದ್ದು, ಪಕ್ಷ ಕೇಲವ 6 ಸ್ಥಾನಗಳನ್ನು ಪಡೆದಿದೆ.
ಸದ್ಯ ಮುಂದಿನ ಚುನಾವಣೆಗೆ ಹೆಚ್ಚಿನ ಕಾಲಾವಕಾಶ ಲಭ್ಯವಾಗಿದ್ದು, ಪಕ್ಷದ ಚಿಹ್ನೆ ಬದಲಾವಣೆ ಮಾಡಿ, ಜನರನ್ನು ಸೆಳೆಯುವ ಚಿಹ್ನೆ ಪಡೆಯಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸದ್ಯದಲ್ಲೇ ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದ್ದಾರೆ. ನಂತರ ಆಯೋಗ ಯಾವ ಚಿಹ್ನೆ ನೀಡಲಿದೆ ಎಂದು ತಿಳಿಯಲಿದೆ.(ಹಾವೇರಿ ಜಿಲ್ಲೆ : ಗೆದ್ದವರು, ಸೋತವರು)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications