ಸಕಾಲ ಹಾಡಿ ಹೊಗಳಿದ ಕಾಂಗ್ರೆಸ್ ಸಚಿವ

ಬೆಂಗಳೂರಿನಲ್ಲಿ ಸುಮಾರು 30 ಸಾವಿರ ಎಕರೆ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ. ಈಗಾಗಲೇ 20 ಸಾವಿರ ಎಕರೆ ವಶಪಡಿಸಿಕೊಳ್ಳಲಾಗಿದೆ. ಉಳಿದ 10 ಸಾವಿರ ಎಕರೆಯನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸರ್ಕಾರದ ಭೂಮಿ ಒತ್ತುವರಿ ಆಗಿರುವುದು ಕಂಡು ಬಂದಿದೆ. ಈ ಭೂಮಿಯನ್ನು ವಾಪಸ್ ಪಡೆಯುವ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಭೂಗಳ್ಳರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಸಿದ್ಧರಾಮಯ್ಯ ಹೇಳಿದ್ದರು ಅದರಂತೆ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು, ನ್ಯಾಯಾಲಯ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುತ್ತದೆ ಹಾಗಾಗಿ ತಪ್ಪಿತಸ್ಥರು ಜೈಲಿಗೆ ಹೋಗಬೇಕಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಭೂವಿವಾದ ನ್ಯಾಯಾಲಯದಲ್ಲಿದೆ. ಹಾಗಾಗಿ ನ್ಯಾಯಾಲಯ ಏನು ತೀರ್ಪು ಕೊಡುವುದೋ ನೋಡಿ ಯಾವುದೇಪ್ರಭಾವಕ್ಕೆ, ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.
ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ರೆವಿನ್ಯೂ ನಿವೇಶನಗಳಲ್ಲಿ ಬಡವರು, ಮಧ್ಯಮವರ್ಗದವರು ಮನೆ ಕಟ್ಟಿಕೊಂಡಿದ್ದಾರೆ. ಇವರಲ್ಲಿ ಬಡವರೇ ಹೆಚ್ಚಾಗಿರುವುದರಿಂದ ಅವರಿಗೆ ತೊಂದರೆಯಾಗದಂತೆ ಸೂಕ್ತ ದರ ನಿಗದಿ ಮಾಡಿ ಸಕ್ರಮಗೊಳಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.
ತಾಲೂಕು ರಚನೆ ಕಷ್ಟ: ಬಿಜೆಪಿ ಸರ್ಕಾರ ಘೋಷಣೆ ಮಾಡಿದ್ದ 34 ಹೊಸ ತಾಲೂಕುಗಳ ರಚನೆ ಬಗ್ಗೆ ನಮ್ಮ ಸರ್ಕಾರ ಮರು ಪರಿಶೀಲನೆ ಮಾಡಲಿದೆ. ಇನ್ನೂ ಕೆಲವು ತಾಲೂಕುಗಳನ್ನು ಮಾಡಬೇಕೆಂಬ ಚಿಂತನೆ ಇದೆ.
ಎಲ್ಲವನ್ನೂ ಪರಿಶೀಲಿಸಿ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ತಾಲೂಕುಗಳನ್ನು ಘೋಷಣೆ ಮಾಡುವುದು ದೊಡ್ಡದಲ್ಲ. ಈ ತಾಲೂಕುಗಳಿಗೆ ಆರ್ಥಿಕ ನೆರವು, ವಿವಿಧ ಸೌಲಭ್ಯ ಒದಗಿಸಬೇಕಾಗುತ್ತದೆ. ಇದ್ಯಾವುದನ್ನೂ ನೋಡದೆಯೇ ಹಿಂದಿನ ಸರ್ಕಾರ 34 ತಾಲೂಕುಗಳನ್ನು ಘೋಷಿಸಿದೆ ಎಂದರು.
ಲಭ್ಯ ಮಾಹಿತಿ ಪ್ರಕಾರ ಒಂದು ಜಿಲ್ಲೆ ರಚನೆಗೆ ಸುಮಾರು 15 ರಿಂದ 20 ಕೋಟಿ ಖರ್ಚಾಗುತ್ತದೆ. ತಾಲೂಕುಗಳ ರಚನೆಗೂ ಕೋಟಿಗಟ್ಟಲೆ ಹಣ ರಾಜ್ಯ ಬೊಕ್ಕಸದಿಂದ ವ್ಯಯ ಮಾಡಬೇಕಾಗುತ್ತದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications