'ನನ್ನ ನಂಬಿ ಪ್ಲೀಸ್; ನಾನು ಯಾವುದೇ ಫಿಕ್ಸ್ ಮಾಡಿಲ್ಲ'

ಏನಪ್ಪಾ ಅಂದರೆ ಶ್ರೀಶಾಂತ ನಿನ್ನೆ ಅತ್ತ ಮತ್ತೆ ಪೊಲೀಸ್ ಕಸ್ಟಡಿಗೆ ಒಳಪಡುತ್ತಿದ್ದಂತೆ ಆತನ ಪರ ವಕೀಲರು ಎಲ್ಲ ಮಾಧ್ಯಮಗಳಿಗೆ ಇಮೇಲ್ ಮಾಡಿ, ತನ್ನ ಕಕ್ಷಿದಾರರಾದ ಶ್ರೀಶಾಂತ್ ಅವರು ಯಾವುದೇ ಸ್ಪಾಟ್ ಫಿಕ್ಸಿಂಗ್ ಮಾಡಿಲ್ಲ ಎಂದಿದ್ದಾರೆ.
'ಹೌದು ನಾನು ಅಮಾಯಕ. ನಾನೇನೂ ತಪ್ಪು ಮಾಡಿಲ್ಲ. ನಾನು ಈ ಸ್ಪಾಟ್ ಫಿಕ್ಸಿಂಗ್ ಕಳ್ಳಾಟದಲ್ಲಿ ಖಂಡಿತಾ ಭಾಗಿಯಾಗಿಲ್ಲ' ಎಂದು ಇಮೇಲಿನಲ್ಲಿ ಶ್ರೀಶಾಂತ ರಾಗ ಬದಲಿಸಿದ್ದಾನೆ. ಪೊಲೀಸರ ಮುಂದೆ ತನ್ನ ತಪ್ಪೊಪ್ಪಿಕೊಂಡು ವಿಚಾರಣೆಗೆಂದು ಏನೇ ಪ್ರಶ್ನೆ ಕೇಳಿದರು ಗೊಳೋ ಎನ್ನುತ್ತಿರುವ ಅಳುಮುಂಜಿ ಶ್ರೀಶಾಂತನ ಬಗ್ಗೆ 'ಅಳುವ ಗಂಡಸರನ್ನು ನಂಬಲೇ ಬಾರದು' ಎಂದು ಹೆಂಗೆಳೆಯರೊಬ್ಬರು ಹೇಳಿದ್ದು ಇಲ್ಲಿ ಉಲ್ಲೇಖಾರ್ಹ.
ರೆಬೆಕಾ ಜಾನ್ ಎಂಬ ಲಾಯರ್ ಮುಖಾಂತರ ಇಮೇಲನ್ನು ರವಾನಿಸಿರುವ ಪುಣ್ಯಾತ್ಮ ಶ್ರೀಶಾಂತ ತಾನು ಯಾವುದೇ ಸ್ಪಾಟ್ ಫಿಕ್ಸಿಂಗ್ ಕಳ್ಳಾಟದಲ್ಲಿ ಭಾಗಿಯಾಗಿಲ್ಲ ಎಂದು ಮತ್ತೆ ಮತ್ತೆ ಹೇಳಿದ್ದು, ನನ್ನ ಜೀವನದಲ್ಲಿ ಕ್ರಿಕೆಟನ್ನು ಆ ಆಟದ ನೈಜ ಮನೋಭಾವದಿಂದ ಆಡಿದ್ದೇನೆ ಎಂದಿದ್ದಾನೆ.
'ನಾನು ನನ್ನ ಜೀವನದ ಅತಿ ದುರ್ಗಮ ಹಂತದಲ್ಲಿ ಸಾಗುತ್ತಿದ್ದೇನೆ ಎಂಬುದು ನನ್ನ ಅರಿವಿಗೆ ಬಂದಿದೆ. ಆದರೆ ಪ್ರಶಂಸೆ/ಪ್ರೋತ್ಸಾಹಗಳನ್ನು ಬೈಗುಳ/ಅವಮಾನಗಳ ಜತೆಜತೆಗೆ ಸ್ವೀಕರಿಸುವುದನ್ನು ಕಲಿತಿದ್ದೇನೆ. ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಅತ್ಯುಚ್ಛ ನಂಬಿಕೆ/ವಿಶ್ವಾಸವಿದೆ. ಕಾಲಾಂತರದಲ್ಲಿ ನಾನು ನಿರ್ದೋಷಿ ಎಂಬುದು ಸಾಬೀತಾಗಲಿದೆ. ಸಭ್ಯ ಆಟಗಾರನಾಗಿ ನಾನು ಮತ್ತೆ ನಿಮ್ಮ ಮುಂದೆ ಕಾಣಿಸಿಕೊಳ್ಳುತ್ತೇನೆ' ಎಂದು ಮೇಲ್ ಪ್ರಕಟಣೆಯಲ್ಲಿ ಶ್ರೀಶಾಂತ್ ಅಲವತ್ತುಕೊಂಡಿದ್ದಾನೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications