ಬಿಎಸ್ವೈ, ನಿರಾಣಿ ವಿರುದ್ಧ ಲೋಕಾಯುಕ್ತ ಕುಣಿಕೆ ಬಿಗಿ

ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರ ಏಕಸದಸ್ಯ ಪೀಠ ಮಂಗಳವಾರ ತನ್ನ ಆದೇಶವನ್ನು ಪ್ರಕಟಿಸಿತು. ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಲಿ.
ಜನಪ್ರತಿನಿಧಿಗಳು ತೆಗೆದುಕೊಂಡ ನಿರ್ಧಾರ ಕಾನೂನಿನ ಚೌಕಟ್ಟಿನಲ್ಲಿದೆಯೇ ಎಂದು ನ್ಯಾಯಾಲಯದ ಮೂಲಕವೇ ತೀರ್ಮಾನವಾಗಲಿ. ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪೀಠ ಸ್ಪಷ್ಟವಾಗಿ ತೀರ್ಪು ನೀಡಿತು.
ಯಡಿಯೂರಪ್ಪ ಮತ್ತು ಮುರುಗೇಶ್ ನಿರಾಣಿ ಸಿರಾಜಿನ್ ಭಾಷ ಹಾಗೂ ಆಲಂ ಪಾಷಾ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಖಾಸಗಿ ದೂರುಗಳನ್ನು ರದ್ದುಗಳಿಸುವಂತೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹೈ ಕೋರ್ಟ್ ತೀರ್ಪಿನಿಂದಾಗಿ ಉಭಯ ನಾಯಕರ ಮೇಲಿನ ವಿಚಾರಣೆ ಪುನಃ ಪ್ರಾರಂಭವಾಗಲಿದೆ.
ಪ್ರತ್ಯೇಕ ಅನುಮತಿ ಅಗತ್ಯವಿಲ್ಲ : ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ 15 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 5 ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬೇಕು ಎಂದು ಬಿಎಸ್ವೈ ಪರ ವಕೀಲರು ವಾದ ಮಂಡಿಸಿದ್ದರು.
ವಾದವನನ್ನು ಪುರಸ್ಕರಿಸದ ನ್ಯಾಯಪೀಠ 15 ಪ್ರಕರಣಗಳನ್ನು 5 ಪ್ರತ್ಯೇಕ ದೂರುಗಳನ್ನಾಗಿ ವಿಂಗಡಿಸಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಎಲ್ಲಾ ಪ್ರಕರಣಗಳ ವಿಚಾರಣೆಯು ಒಟ್ಟಿಗೆ ನಡೆಯಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಾಲಯದ ಆದೇಶವೇ ಅಂತಿಮ ಎಂದು ನ್ಯಾಯಪೀಠ ಸೂಚಿಸಿತು.
ವಿಚಾರಣೆ ಎದುರಿಸಿ : ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸಾರ್ವಜನಿಕ ಹಿತಾಸಕ್ತಿಗಾಗಿ ಡಿನೋಟಿಫಿಕೇಷನ್ ಆದೇಶವನ್ನು ಹೊರಡಿಸಿದ್ದಾರೆ. ಇದನ್ನು ಅಕ್ರಮ ಎಂದು ಪರಿಗಣಿಸಬಾರದು ಎಂದು ವಕೀಲರು ವಾದ ಮಂಡಿಸಿದ್ದರು. ಇದನ್ನು ಪುರಸ್ಕರಿಸದ ಕೋರ್ಟ್, ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿ, ಸತ್ಯಾಂಶವನ್ನು ನ್ಯಾಯಾಲಯದ ಗಮನಕ್ಕೆ ತನ್ನಿ ಎಂದು ಹೇಳಿತು.
ಯಡಿಯೂರಪ್ಪ : ಶ್ರೀರಾಂಪುರ, ಆರ್ಎಂವಿ ಬಡಾವಣೆ ಹಾಗೂ ಕೆಂಪಾಪುರದಲ್ಲಿ ಕ್ರಮವಾಗಿ 11 ಎಕರೆ 25 ಗುಂಟೆ, ನಾಗರಬಾವಿಯಲ್ಲಿ 5 ಎಕರೆ 13 ಗುಂಟೆ ಜಾಗವನ್ನು ಯಡಿಯೂರಪ್ಪ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಎಸ್ವೈ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಮುರುಗೇಶ್ ನಿರಾಣಿ : ಬೆಂಗಳೂರಿನ ದೇವನಹಳ್ಳಿಯಲ್ಲಿ ಕೆಐಎಡಿಬಿ ಮೂಲಕ ನಕಲಿ ದಾಖಲೆ ಸೃಷ್ಟಿಸಿ 26 ಎಕರೆ ಭೂಮಿಯನ್ನು ತಮ್ಮ ಕಂಪನಿಗೆ ನಿರಾಣಿ ಪಡೆದಿದ್ದಾರೆ. ಇದಕ್ಕೂ ಮೊದಲು 26 ಎಕರೆ ಭೂಮಿಯನ್ನು ಹಾರ್ಡ್ವೇರ್ ಪಾರ್ಕ್ಗಾಗಿ ಮೀಸಲಿಡಲಾಗಿತ್ತು ಎಂಬ ದೂರು ದಾಖಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications