ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು : ಸಚಿವರು

ಬುಧವಾರ ಸಂಜೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶರಣ್ ಪಕ್ರಾಶ್ ಪಾಟೀಲ್, ಹಿಂದಿನ ಸರ್ಕಾರ ಏಳು ಹೊಸ ವೈದ್ಯ ಕಾಲೇಜು ಸ್ಥಾಪನೆಗೆ ನಿರ್ಣಯ ಕೈಗೊಂಡಿತ್ತು. ಆದರೆ ನಮ್ಮ ಸರ್ಕಾರ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭವಾದರೆ, ಜಿಲ್ಲೆಯಲ್ಲೊಂದು ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಳು ನಿರ್ಮಾಣವಾಗುತ್ತವೆ. ಇದರಿಂದಾಗಿ ಬಡವರು ಖಾಸಗಿ ಆಸ್ಪತ್ರಗೆ ಹೋಗುವುದಿಲ್ಲ. ಕಾಲೇಜು ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.
ಕೇಂದ್ರ ಸರ್ಕಾರ 12 ನೇ ಪಂಚವಾರ್ಷಿಕ ಯೋಜನೆಯಲ್ಲಿ ರಾಜ್ಯಗಳಿಗೆ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅನುದಾನ ನೀಡಲಿದೆ. ಇದನ್ನು ಬಳಸಿಕೊಂಡು ಹಿಂದುಳಿದ ಜಿಲ್ಲೆಗಳಲ್ಲಿ ಮೊದಲು ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಸೇವೆ ಕಡ್ಡಾಯ : ವೈದ್ಯ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ವಿಚಾರಕ್ಕೆ ನಮ್ಮ ಸರ್ಕಾರ ಸಹ ಬದ್ಧವಿದೆ. ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ನಿರ್ಣಯ ಜಾರಿಗೊಳಿಸಲು ನಾವು ಸಿದ್ದರಿದ್ದೇವೆ ಎಂದು ಸ್ವತಃ ವೈದ್ಯರಾಗಿರುವ ಸಚಿವ ಪಾಟೀಲ್ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ವೈದ್ಯರ ಕೊರತೆ ಉಂಟಾಗಲು ಗ್ರಾಮೀಣ ಸೇವೆ ಕಡ್ಡಾಯ ಗೊಳಿಸದಿರುವುದೇ ಕಾರಣವಾಗಿದೆ ಎಂದು ವಿಶ್ಲೇಷಿಸಿದ ಸಚಿವರು, ಗ್ರಾಮೀಣ ವೈದ್ಯ ಸೇವೆ ಕಡ್ಡಾಯ ಮಾಡಿದರೆ, ವೈದ್ಯರ ಕೊರತೆಯೂ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications