ರವಿವರ್ಮಾ ಕುಮಾರ್ ನೂತನ ಅಡ್ವೋಕೇಟ್ ಜನರಲ್

ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ರವಿಮರ್ಮಾ ಕುಮಾರ್ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಿಸಲಾಗಿದೆ ಎಂದು ಹೇಳಿದರು.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ರವಿಮರ್ಮಾ ಕುಮಾರ್ 1975ರಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದರು. ರಾಜ್ಯದ ಹೈ ಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಲ್ಲಿ ಸುಮಾರು ಮೂವತ್ತು ಸಾವಿರ ಪ್ರಕರಣಗಳಲ್ಲಿ ವಾದ ಮಂಡಿಸಿ ಅಪಾರ ಅನುಭವ ಪಡೆದಿದ್ದಾರೆ.
ಪ್ರಗತಿಪರ ಚಿಂತಕರಾಗಿರುವ ರವಿವರ್ಮಾ ಕುಮಾರ್ ಹಿಂದುಳಿದ ಆಯೋಗದ ಮೊದಲ ಅಧ್ಯಕ್ಷರಾಗಿ 1997ರಲ್ಲಿ ನೇಮಕಗೊಂಡರು. ಮೂರು ವರ್ಷಗಳ ಕಾಲ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ 85 ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು.
ಸಂವಿಧಾನ, ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಂತಾದ ವಿಷಯಗಳಲ್ಲಿ ರವಿವರ್ಮಾ ಕುಮಾರ್ ಅಪಾರವಾದ ಅನುಭವ ಹೊಂದಿದ್ದು, ನಿರರ್ಗಳವಾಗಿ ವಾದ ಮಂಡಿಸುವಷ್ಟು ಪ್ರತಿಭಾವಂತರಾಗಿದ್ದಾರೆ.
ಬುಧವಾರ ಸ್ವತಃ ಸಿಎಂ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಟಿ.ವಿ.ಜಯಚಂದ್ರ ರವಿವರ್ಮಾ ಕುಮಾರ್ ಅವರ ಜೊತೆ ಮಾತುಕತೆ ನಡೆಸಿ ಅಡ್ವೋಕೇಟ್ ಜನರಲ್ ಹುದ್ದೆಗೆ ನೇಮಿಸುವುದಾಗಿ ಮಾತುಕತೆ ನಡೆಸಿದ್ದರು. ಗುರುವಾರ ಅಧಿಕೃತ ಆದೇಶ ಹೊರಬಿದ್ದಿದ್ದು, ಅಡ್ವೋಕೇಟ್ ಜನರಲ್ ಆಗಿದ್ದ ವಿಜಯಶಂಕರ್ ಅವರ ಸ್ಥಾನಕ್ಕೆ ರವಿವರ್ಮಾ ಕುಮಾರ್ ಅವರನ್ನು ನೇಮಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications