59ಲಕ್ಷ ಕುದುರೆ ಬಾಲಕ್ಕೆ ಕಟ್ಟಿದ ವಂಚಕ ಬ್ಯಾಂಕ್ ಅಧಿಕಾರಿ

ನಗರದ ಹೊರವಲಯದಲ್ಲಿ ಅಯ್ಯಪ್ಪ ದೇವಸ್ಥಾನದ ಬಳಿಯಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಕೆಯ ಸಹಾಯಕ ಪ್ರಬಂಧಕ ಕೆ ಎನ್ ರಂಗರಾಜನ್ ಈ ವಂಚನೆ ಪುರಾಣದ ಸೂತ್ರಧಾರ. ಆತನಿಗೆ ನೆರವಾದ ಆರೋಪದ ಮೇಲೆ ಓ ಬೀಚುಪಲ್ಲಿ (ಮೂಲ ಆಂಧ್ರದ ಕರ್ನೂಲ್ ) ಎಂಬ ಕ್ಯಾಷಿಯರನನ್ನೂ ಪೊಲೀಸರು ತಕ್ಷಣ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಖದೀಮ ಜೋಡಿ ಲಪಟಾಯಿಸಿರುವುದು 59 ಲಕ್ಷ ರೂ ಮತ್ತು ಸುಮಾರು ಒಂದೂವರೆ ಕೆಜಿ ತೂಕದ ಆಭರಣಗಳನ್ನು.
ಜೂಜಿನ ದಾಸ ಆದ ಬರಿಗೈ ದಾಸ: ಕುದುರೆ ಜೂಜಿನ ದಾಸನಾಗಿದ್ದ ಮ್ಯಾನೇಜರ್ ರಂಗರಾಜನ್ ಅಷ್ಟೂ ಹಣವನ್ನು ಜೂಜಿಗೆ ಸುರಿದಿದ್ದು, ಬರಿಗೈ ದಾಸನಾಗಿದ್ದಾನೆ ಎಂದು ತಿಳೀದುಬಂದಿದೆ. 53 ವರ್ಷದ ರಂಗರಾಜನ್ ಮೂಲತಃ ಚೆನ್ನೈನವನಾಗಿದ್ದು, ಯಲಹಂಕದಲ್ಲಿ ವಾಸವಾಗಿದ್ದ. ಆರು ತಿಂಗಳ ಹಿಂದೆ ಇಲ್ಲಿನೆ ಶಾಖೆಗೆ ವರ್ಗವಾಗಿ ಬರುವ ಮುನ್ನ ಆರೋಪಿ ರಂಗರಾಜನ್ 34 ವರ್ಷ ಬ್ಯಾಂಕಿಗೆ ದುಡಿದಿದ್ದಾನೆ.
ಮೂರು ದಿನಗಳ ಹಿಂದೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬ್ಯಾಂಕಿನ ಬೆಂಗಳೂರು ವಿಭಾಗೀಯ ಕಚೇರಿಯ ವ್ಯವಸ್ಥಾಪಕ ವಸಂತ್ ಕುಮಾರ್ ಅವರು ಚಿಕ್ಕಬಳ್ಳಾಪುರ ಪೊಲೀಸರನ್ನು ಎಚ್ಚರಿಸಿದ್ದಾರೆ. ತಕ್ಷಣ ಕಾರ್ಯಾಚರಣೆಗೆ ಇಳಿದ ಚಿಕ್ಕಬಳ್ಳಾಪುರ ಡಿಎಸ್ಪಿ ಎಬಿ ದೇವಯ್ಯ ಆರೋಪಿಗಳಿಬ್ಬರನ್ನೂ ಬಂಧಿಸಿ, ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಗ್ರಾಹಕರ ಲಾಕರುಗಳಿಂದ ಎಗರಿಸಿದ ಚಿನ್ನಾಭರಣವನ್ನು ಆರೋಪಿಗಳು ಮುತ್ತೂಟ್ ಫೈನಾನ್ಸ್ ಮತ್ತಿತರ ಖಾಸಗಿ ಫೈನಾನ್ಸ್ ಕಂಪನಿಗಳಲ್ಲಿ ಗಿರವಿ ಇಟ್ಟಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications