ನಿಗಮ, ಮಂಡಳಿಗಳ ಅಧ್ಯಕ್ಷರ ಬದಲಾವಣೆ?

ಸರ್ಕಾರದ ಆದೇಶದಿಂದಾಗಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷೆ ತಾರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ತಾರಾ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದಾರೆ ಎಂಬ ಕಾರಣವನ್ನೂ ಇಟ್ಟುಕೊಂಡು ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ.
ಆದರೆ, ಮಾಧ್ಯಮ ಅಕಾಡಮಿ ಅಧ್ಯಕ್ಷರಾದ ಪೊನ್ನಪ್ಪ ಅವರನ್ನು ಹುದ್ದೆಯಲ್ಲಿ ಮುಂದುವರೆಸಲು ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಕೆಲವು ಅಕಾಡಮಿಗಳ ಅಧ್ಯಕ್ಷರ ಹುದ್ದೆಗೆ ಕಂಟಕ ಎದುರಾಗಿದೆ.
ಸದಾ ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಹ ತಮ್ಮ ಸ್ಥಾನ ತೊರೆಯಬೇಕಾಗಿದೆ ಎನ್ನುವುದು ಸರ್ಕಾರದ ಮೂಲಗಳ ಮಾಹಿತಿ. ಇಂದು ಸಂಜೆ ಅಥವ ಸೋಮವಾರ ಸರ್ಕಾರದಿಂದ ತಾರಾ, ಮುಖ್ಯಮಂತ್ರಿ ಚಂದ್ರು ಅವರಿಗೆ ರಾಜೀನಾಮೆ ನೀಡುವಂತೆ ಅಧಿಕೃತ ಆದೇಶ ರವಾನೆಯಾಗಲಿದೆ.
ಸಚಿವ ಸ್ಥಾನ ಸಿಗದೆ ಅಸಮಾಧಾನ ಗೊಂಡಿರುವ ನಾಯಕರನ್ನು ತೃಪ್ತಿ ಪಡಿಸಲು ಅವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಹುದ್ದೆ ನೀಡಲು ಸಿಎಂ ಸಿದ್ದರಾಮಯ್ಯ ಆಲೋಚನೆ ನಡೆಸಿದ್ದಾರೆ. ಆದ್ದರಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯ್ಕೆಯಾದ ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಗೇಟ್ ಪಾಸ್ ಕೊಡಲು ತಂತ್ರ ರಚಿಸಲಾಗಿದೆ.
ತಾರಾ ಅವರಿಂದ ತೆರವಾಗುವ ಕರ್ನಾಟಕ ಚಲನಚಿತ್ರ ಅಕಾಡಮಿ ಸ್ಥಾನಕ್ಕೆ ಯಾರನ್ನು ನೇಮಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಸಿನಿಮಾ ರಂಗದ ಅಂಬರೀಶ್ ಮತ್ತು ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಿ ಸಿದ್ದರಾಮಯ್ಯ ಬಣ್ಣದ ಲೋಕಕ್ಕೂ ಪ್ರಾಧನ್ಯತೆ ನೀಡಿದ್ದಾರೆ.
ಆದ್ದರಿಂದ ಚಲನಚಿತ್ರ ಅಕಾಡೆಮಿಗೆ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಬೆಂಬಲಿಗರಿಗೆ ಸ್ಥಾನ ನೀಡಲು ನಿಗಮ ಮಂಡಳಿಗಳ ಅಧ್ಯಕ್ಷರ ಹುದ್ದೆಗಳನ್ನು ತೆರವುಗೊಳಿಸುತ್ತಿರುವುದಂತೂ ರಹಸ್ಯವಾಗಿ ಉಳಿದಿಲ್ಲ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications