ವೃತ್ತಿ ಶಿಕ್ಷಣ ಈ ವರ್ಷ ದುಬಾರಿ ಆಗಲ್ಲ

ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ನಡೆಸ ಸಭೆಯ ಬಳಿಕ, ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಿಸುವ ಪ್ರಸ್ತಾವನೆಯನ್ನು ಕೈ ಬಿಟ್ಟಿವೆ. ಮುಂದಿನ ವರ್ಷದಿಂದ ಶುಲ್ಕ ಹೆಚ್ಚಳ ಮಾಡುವುದಾಗಿ ಸಂಸ್ಥೆಗಳು ಹೇಳಿವೆ.
ಏಕರೂಪ ಶುಲ್ಕ ಹಾಗೂ ಮೇಲ್ವಿಚಾರಣೆ ಸಮಿತಿ ರಚನೆಗೆ ಅವಕಾಶ ಕಲ್ಪಿಸಿದ್ದ 2006ರ ಸಿಇಟಿ ಕಾಯ್ದೆಯನ್ನು ತಾಂತ್ರಿಕ ಕಾರಣಗಳಿಂದಾಗಿ ಈ ಬಾರಿ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಈ ವರ್ಷ ಶುಲ್ಕ ಮತ್ತು ಸೀಟು ಹಂಚಿಕೆ ಕಳೆದ ಬಾರಿಯ ಮಾದರಿಯಲ್ಲೇ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ, ಕಾಯಿದೆ ಅನುಷ್ಠಾನಗೊಳಿಸಿ ವಿದ್ಯಾರ್ಥಿಗಳಿಗೆ ನೆರವಾಗಲು ಸರ್ಕಾರ ಸಿದ್ಧವಿದೆ. ಆದರೆ, ಈ ಬಾರಿ ಸಮಿತಿ ರಚನೆಯ ಗಡುವು ಮುಗಿದಿರುವುದರಿಂದ ಮುಂದಿನ ವರ್ಷ ಕಾಯ್ದೆ ಜಾರಿಗೊಳಿಸಲಾಗುವುದು ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಕಾನೂನು ಸಚಿವ ಟಿ.ಬಿ.ಜಯಚಂದ್ರ ಮತ್ತು ಖಾಸಗೀ ಶಿಕ್ಷಣ ಸಂಸ್ಥೆಯ ಮಾಲೀಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮೇ 28ಕ್ಕೆ ಫಲಿತಾಂಶ : ಮೇ 28ರ ಸಂಜೆ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕೌನ್ಸೆಲಿಂಗ್
* ಮೇ 29 ಬದಲು ಜೂ.3ರಿಂದ 23ರ ವರೆಗೆ ಮೂಲ ದಾಖಲೆ ಪರಿಶೀಲನೆ
* ಜೂ.3 ವಿಕಲಚೇತನ ಮತ್ತು ಎಸ್ ಸಿಸಿ (ಬೆಂಗಳೂರಿನ ಸಿಇಟಿ ಕೇಂದ್ರ)
* ಜೂ.4 ಕ್ರೀಡಾ ಕೋಟಾದ ಅಭ್ಯ್ಥರ್ಥಿಗಳಿಗೆ (ಬೆಂಗಳೂರಿನ ಸಿಇಟಿ ಕೇಂದ್ರ)
* ಜೂ.5ರಿಂದ 23-ರಾಜ್ಯದ 1 ಸಿಇಟಿ ಕೇಂದ್ರಗಳಲ್ಲಿ
ಸೀಟು ಮತ್ತು ಶುಲ್ಕ ವಿವರಗಳು
* ಇಂಜಿನಿಯರಿಂಗ್ ಸೀಟು
ಸೀಟು : 45:55 ( ಅಲ್ಪ ಸಂಖ್ಯಾತ 40:60)
ಶುಲ್ಕ : 18,090 (ಸರ್ಕಾರಿ)
36,090-41,590(ಖಾಸಗಿ)
* ಮೆಡಿಕಲ್
40:60
(ಅಲ್ಪ ಸಂಖ್ಯಾತ 25:75)
ಶುಲ್ಕ : 16,700(ಸರ್ಕಾರಿ)
46,00(ಖಾಸಗಿ)
* ದಂತವೈದ್ಯ
35:65 (ಅಲ್ಪ ಸಂಖ್ಯಾತ 25:75)
14,400 (ಸರ್ಕಾರಿ)
35,500 (ಖಾಸಗಿ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications