ರಾಜಕೀಯಕ್ಕೆ ಬರೋಲ್ಲ: ರಾಧಿಕಾ ಕುಮಾರಸ್ವಾಮಿ ಘೋಷಣೆ

ರಾಜಕೀಯದಿಂದ ದೂರವೆಂದಿರುವ ನಟಿ ರಾಧಿಕಾ ಅವರು ಸಿನಿಮಾ ರಂಗಕ್ಕೆ ಮತ್ತಷ್ಟು ಹತ್ತಿರವಾಗುವ ಮಾತನ್ನಾಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ.
ನಿರ್ಮಾಪಕಿ ರಾಧಿಕಾ ಅವರು ತಮ್ಮದೇ ನಿರ್ಮಾಣದ 'ಸ್ವೀಟಿ ನನ್ನ ಜೋಡಿ' ಚಿತ್ರೀಕರಣದ ನಡುವೆ ರಿಲ್ಯಾಕ್ಸ್ ಆಗಲು, ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ವಿಹಾರದಲ್ಲಿದ್ದಾರೆ. ಕುಶಾಲನಗರದ ಹೊಟೇಲ್ ಉದ್ಯಮಿಯೊಬ್ಬರ ಮನೆಯಲ್ಲಿ ಆತಿಥ್ಯ ಸ್ವೀಕರಿಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜಕೀಯದ ಬಗ್ಗೆ ಮಾತನಾಡಿದರು.
'ಮೊದಲಿಂದಲೂ ಅಷ್ಟೇ ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ. ಆದರೆ ಸಿನಿಮಾ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದೇನೆ. ಇದುವರೆಗೆ ಕನ್ನಡ, ತೆಲುಗು, ತಮಿಳು ಸೇರಿದಂತೆ ಒಟ್ಟು 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿದರು.
'6 ವರ್ಷಗಳಿಂದ ಸಿನಿಮಾ ಕ್ಷೇತ್ರದಿಂದ ದೂರವಿದ್ದೆ. ಈಗ ಮಗಳು ಶಮಿಕಾ ಕುಮಾರಸ್ವಾಮಿಗೆ 4 ವರ್ಷ ತುಂಬುತ್ತಿದೆ. ಆದ್ದರಿಂದ ಮತ್ತೆ ಸಿನಿಮಾದತ್ತ ಒಲವು ತೋರುತ್ತಿದ್ದೇನೆ. ನನ್ನ ನಿರ್ಮಾಣದ, ವಿಜಯ ಲಕ್ಷ್ಮಿಸಿಂಗ್ ನಿರ್ದೇಶಿಸಿರುವ 'ಸ್ವೀಟಿ ನನ್ನ ಜೋಡಿ' ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದಲ್ಲಿ ಆದಿತ್ಯ ನನಗೆ ಹೀರೋ ಆಗಿದ್ದಾರೆ. ನಟಿ ರಮ್ಯಾಕೃಷ್ಣ ತಾಯಿಯ ಪಾತ್ರ ಮಾಡಿದ್ದರೆ, ನಟ ಜೈಜಗದೀಶ್ ತಂದೆ ಪಾತ್ರದಲ್ಲಿದ್ದಾರೆ. ಎಂದಿನಂತೆ ಸಾಧು ಕೋಕಿಲಾ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ' ಎಂದು ರಾಧಿಕಾ ತಿಳಿಸಿದರು.
ಮಗಳೇ ಸರ್ವಸ್ವ: 'ಇದುವರೆಗೂ, ಸ್ವೀಟಿ ಮಗಳು ನನ್ನ ಜತೆ ಶೂಟಿಂಗಿಗೆಲ್ಲ ಬರುತ್ತಿದ್ದಳು. ಶಮಿಕಾಳನ್ನು ಈ ವರ್ಷ ಶಾಲೆಗೆ ಸೇರಿಸಬೇಕು ಎಂದು ತಾಯಿಯಾಗಿ ತಮ್ಮ ಜವಾಬ್ದಾರಿಯನ್ನು ನೆನಪಿಸಿಕೊಂಡ ರಾಧಿಕಾ, ನನಗೆ ಸ್ನೇಹಿತರು ಅಷ್ಟಾಗಿಲ್ಲ. ಹೀಗಾಗಿ ನನಗೆ ಮಗಳು ಶಮಿಕಾಳೇ ಉತ್ತಮ ಸ್ನೇಹಿತೆ' ಎಂದು ರಾಧಿಕಾ ಕುಮಾರಸ್ವಾಮಿ ಹೂ ನಗೆ ಚೆಲ್ಲಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications