ಖಾತೆ ಕ್ಯಾತೆ, ಮಾತು ಬದಲಿಸಿದ ಅಭಯಚಂದ್ರ ಜೈನ್

ಕ್ರೀಡಾ ಖಾತೆ ನೀಡುತ್ತಾರೆ ಎಂದು ನಿರೀಕ್ಷಿಸಿದ್ದೆ. ನನಗೆ ಆ ಖಾತೆಯಲ್ಲಿ ಹೆಚ್ಚಿನ ಆಸಕ್ತಿ ಇದೆ ನಿಜ.ಮೀನುಗಾರಿಕೆ ಖಾತೆ ಬೇಡ ಎಂದು ಜೈನ ಮುನಿಗಳು ಸಲಹೆ ಮಾಡಿದ್ದರು. ಅದರಂತೆ ಖಾತೆ ಬದಲಾವಣೆಗಾಗಿ ಮನವಿ ಮಾಡಿದ್ದೆ. ಸದ್ಯದಲ್ಲೇ ಖಾತೆ ಹಿಂದಿರುಗಿಸುವೆ ಎಂದು ಹೇಳಿದ್ದು ನಿಜ ಎಂದು ಅಭಯ್ ಚಂದ್ರ ಜೈನ್ ಹೇಳಿದರು.
ನಾನು ಅಹಿಂಸೆ ಪ್ರತಿಪಾದನೆ ಮಾಡುವ ಜೈನ ಧರ್ಮಕ್ಕೆ ಸೇರಿದ್ದು, ಮೀನುಗಾರಿಕೆ ಇಲಾಖೆಯೊಂದಿಗಿನ ಕೆಲಸ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅಭಯ್ ಚಂದ್ರ ಜೈನ್ ಅವರು ತಿಳಿಸಿದ್ದರು.
ಮೀನುಗಾರಿಕೆ ಖಾತೆ ಬೇಡ ಎಂದು ನನ್ನ ಕುಟುಂಬ ಹಾಗೂ ಸಮುದಾಯದವರು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಸದ್ಯದಲ್ಲೇ ತಾವು ತಮ್ಮ ಖಾತೆಯನ್ನು ಮುಖ್ಯಮಂತ್ರಿಗಳಿಗೆ ಹಿಂದಿರುಗಿಸುವುದಾಗಿ ಅಭಯ್ ಚಂದ್ರ ಜೈನ್ ಅವರು ಹೇಳಿದ್ದರು.
ಮೂಡುಬಿದಿರೆಯ ಸ್ವರ್ಣಮಂದಿರದಲ್ಲಿ ನಡೆದ 'ಪೌರ ಸನ್ಮಾನ'ವನ್ನು ಸ್ವೀಕರಿಸಿ ಮಾತನಾಡಿದ ಅವರು, ತನಗೆ ನೀಡಿರುವ ಮೀನುಗಾರಿಕೆ ಖಾತೆಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ಕರಾವಳಿಯ ಮೀನುಗಾರಿಕಾ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಪಡೆದು ಅಭಿವೃದ್ಧಿ ಮಾಡಿದ ನಂತರ ಖಾತೆ ಹಿಂದಿರುಗಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜತೆ ಮಾತುಕತೆ ನಡೆಸಲಾ ಗುವುದು ಎಂದವರು ತಿಳಿಸಿದ್ದರು.
ಮಾಧ್ಯಮಗಳಲ್ಲಿ ಈ ಸುದ್ದಿ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಜೈನ್ ಅವರಿಗೆ ಕರೆ ಮಾಡಿ ಒಂದು ಸುತ್ತಿನ ತರಾಟೆ ತೆಗೆದುಕೊಂಡಿದ್ದಾರಂತೆ. ನಂತರ ಖಾತೆ ಬದಲಾವಣೆ ಬೇಡ ಎಂದು ಸಿಎಂ ಸಲಹೆ ನೀಡಿದ್ದಾರೆ ಎಂದು ಮತ್ತೊಮ್ಮೆ ಮಾದ್ಯಮಗಳ ಮುಂದೆ ಬಂದು ಸಚಿವ ಜೈನ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications