ಸರ್ಕಾರಕ್ಕೆ 10 ಲಕ್ಷ ದಂಡ ಕಟ್ಟಿದ ಧೂಮಪಾನಿಗಳು

ಕರ್ನಾಟಕದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದನ್ನು 2004ರಿಂದ ನಿಷೇಧಿಸಲಾಗಿದೆ. ಈ ಕಾಯ್ದೆ 2008ರಿಂದ ಕಡ್ಡಾಯವಾಗಿ ಜಾರಿಗೆ ಬಂದಿದೆ. ಆದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವಂತಿಲ್ಲ.
ಜನರು ಇದನ್ನು ಮರೆತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಂಡ ವಿಧಿಸುತ್ತದೆ. ಇಲಾಖೆ ಆಯುಕ್ತ ವಿ.ಬಿ.ಪಾಟೀಲ್ ಪ್ರಕಾರ, 2008ರಿಂದ ಇದುವರೆಗೂ ಹತ್ತು ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿಕೊಂಡು, 10.79 ಲಕ್ಷ ರೂ.ಹಣವನ್ನು ದಂಡ ರೂಪದಲ್ಲಿ ಪಡೆಯಲಾಗಿದೆ.
ಇನ್ನೂ 1,052 ಪ್ರಕರಣಗಳು ಇತ್ಯರ್ಥವಾಗಬೇಕಿದೆ. ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ಮಾಡದಂತೆ ಜನರಿಗೆ ಅರಿವು ಮೂಡಿಸಲು ಇಲಾಖೆ ಹಲವಾರ ಯೋಜನೆಗಳನ್ನು ಜಾರಿಗೊಳಿಸಲು ಇಲಾಖೆ ಮುಂದಾಗಿದೆ. ಪೊಲೀಸರು ಸಹಕಾರದಿಂದ ಕಾಯ್ದೆಯನ್ನು ಕಡ್ಡಾಯವಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ.
ಎನ್ ಜಿಓಗಳ ಸಹಕಾರ : ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯ ಧೂಮಪಾನ ನಿಷೇಧ ಕಾಯ್ದೆ ಕಡ್ಡಾಯವಾಗಿ ಜಾರಿಗೊಳಿಸಲು ಎನ್ ಜಿಓಗಳ ಸಹಕಾರ ಪಡೆಯಲು ಇಲಾಖೆ ನಿರ್ಧರಿಸಿದೆ. ಅಲ್ಲದೇ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ರೈತರಿಗೆ ತಂಬಾಕು ಬೆಳೆಯವ ಬದಲು ಬೇರೆ ಬೆಳೆ ಬೆಳೆಯುವಂತೆ ಅರಿವು ಮೂಡಿಸಲು ಯೋಜನೆ ತಯಾರಿಸಲಾಗಿದೆ.
ಕಡ್ಡಾಯ ಪಾಲನೆ : ವಿದ್ಯಾಸಂಸ್ಥೆಗಳು ಇರುವ ಪ್ರದೇಶದ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಲು ಇಲಾಖೆ ಸಜ್ಜಾಗಿದೆ. ಹಲವು ಇಲಾಖೆಗಳ ಜೊತೆ ಚರ್ಚೆ ನಡೆಸಿ, ಪ್ರತಿ ಜಿಲ್ಲೆಯಲ್ಲೂ ನೊಡೆಲ್ ಅಧಿಕಾರಿ ನೇಮಿಸಲಾಗಿದೆ.
ಪೊಲೀಸ್ ಇಲಾಖೆಯ ಸಹಕಾರವನ್ನು ಆರೋಗ್ಯ ಇಲಾಖೆ ಕೋರಿದ್ದು, ಸಾರ್ವಜನಿಕ ಸ್ಥಳ ಮತ್ತು ವಿದ್ಯಾಸಂಸ್ಥೆಗಳ ಆವರಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನ ಮಾರಾಟದ ವಿರುದ್ದ ಕ್ರಮ ಕೈಗೊಳ್ಳಲು ಸಜ್ಜಾಗಿದೆ.
ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ, ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡಿ ಇತರರ ಆರೋಗ್ಯಕ್ಕೂ ಹಾನಿ ಉಂಟುಮಾಡುವ ವ್ಯಕ್ತಿಗಳಿಗೆ ಇಲಾಖೆ ಅಂತಿಮ ಎಚ್ಚರಿಕೆ ನೀಡಿದೆ. ಅದರೆಂತೆ ಧೂಮಪಾನ ಮಾಡಿ ಸಿಕ್ಕಿಬಿದ್ದರೆ ದಂಡ ಕಟ್ಟಬೇಕಾಗಿರುವುದು ಖಂಡಿತ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications