ಒಡಿಶಾ ಮೂಲದ ದಂಪತಿಗಳು ಬೆಂಕಿಗಾಹುತಿ

ದಂಪತಿಗಳು ತಾವು ವಾಸಿಸುತ್ತಿದ್ದ ಶೆಡ್ ನಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಾರೆ. ಮೃತರನ್ನು ಬಾಬು ಜಾನ್ (25) ಹಾಗೂ ಭಯಾನಿ ಜಾನ್ (22) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಸಹ ಕಾರ್ಮಿಕರು ಶೆಡ್ ಗೆ ಆಗಮಿಸಿದ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ದಂಪತಿಗಳು ಕೆಲವು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಎರಡು ದಿನಗಳ ಹಿಂದೆ ಎಂಟು ಜನರೊಂದಿಗೆ ಒಡಿಶಾದಿಂದ ಕೆಲಸ ಹುಡುಕಿಕೊಂಡು ನಗರಕ್ಕೆ ಆಗಮಿಸಿದ್ದರು ಎಂದು ಸಹ ಕಾರ್ಮಿಕರು ತಿಳಿಸಿದ್ದಾರೆ.
ರಾಮಭೋವಿ ಕಾಲೊನಿ ಬಳಿ ನೀರಿನ ಟ್ಯಾಂಕರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದರು. ಕಾಮಗಾರಿ ನಡೆಯುತ್ತಿದ್ದ ಸಮೀಪದ ಶೆಡ್ ನಲ್ಲಿ ವಾಸಿಸುತ್ತಿದ್ದರು. ಘಟನೆಗೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ.
ಆನಾರೋಗ್ಯದ ನೆಪವೊಡ್ಡಿ ಮಾಲೀಕನಿಂದ 500 ರೂ. ಪಡೆದು ಮಂಗಳವಾರ ಕೆಲಸಕ್ಕೆ ತೆರಳದೇ ದಂಪತಿ ಶೆಡ್ ನಲ್ಲಿ ಉಳಿದಿದ್ದರು. ಮಧ್ಯಾಹ್ನದ ವೇಳೆಗೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೆಡ್ ನಲ್ಲಿ ಹೊಗೆ ಬರುವುದನ್ನು ಗಮನಿಸಿ ಸಹ ಕಾರ್ಮಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಅವರು ಸುಟ್ಟು ಕರಕಲಾಗಿದ್ದರು.
ಪೋಷಕರ ವಿರೋಧದ ನಡುವೆಯೇ ಇವರು ವಿವಾಹವಾಗಿದ್ದರು ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಹ ಕಾರ್ಮಿಕರು ಪೊಲೀಸರಿಗೆ ತಿಳಿಸಿದ್ದಾರೆ. ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications