ಒಡಿಶಾ ಮೂಲದ ದಂಪತಿಗಳು ಬೆಂಕಿಗಾಹುತಿ

ದಂಪತಿಗಳು ತಾವು ವಾಸಿಸುತ್ತಿದ್ದ ಶೆಡ್ ನಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಾರೆ. ಮೃತರನ್ನು ಬಾಬು ಜಾನ್ (25) ಹಾಗೂ ಭಯಾನಿ ಜಾನ್ (22) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಸಹ ಕಾರ್ಮಿಕರು ಶೆಡ್ ಗೆ ಆಗಮಿಸಿದ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ದಂಪತಿಗಳು ಕೆಲವು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಎರಡು ದಿನಗಳ ಹಿಂದೆ ಎಂಟು ಜನರೊಂದಿಗೆ ಒಡಿಶಾದಿಂದ ಕೆಲಸ ಹುಡುಕಿಕೊಂಡು ನಗರಕ್ಕೆ ಆಗಮಿಸಿದ್ದರು ಎಂದು ಸಹ ಕಾರ್ಮಿಕರು ತಿಳಿಸಿದ್ದಾರೆ.
ರಾಮಭೋವಿ ಕಾಲೊನಿ ಬಳಿ ನೀರಿನ ಟ್ಯಾಂಕರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದರು. ಕಾಮಗಾರಿ ನಡೆಯುತ್ತಿದ್ದ ಸಮೀಪದ ಶೆಡ್ ನಲ್ಲಿ ವಾಸಿಸುತ್ತಿದ್ದರು. ಘಟನೆಗೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ.
ಆನಾರೋಗ್ಯದ ನೆಪವೊಡ್ಡಿ ಮಾಲೀಕನಿಂದ 500 ರೂ. ಪಡೆದು ಮಂಗಳವಾರ ಕೆಲಸಕ್ಕೆ ತೆರಳದೇ ದಂಪತಿ ಶೆಡ್ ನಲ್ಲಿ ಉಳಿದಿದ್ದರು. ಮಧ್ಯಾಹ್ನದ ವೇಳೆಗೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೆಡ್ ನಲ್ಲಿ ಹೊಗೆ ಬರುವುದನ್ನು ಗಮನಿಸಿ ಸಹ ಕಾರ್ಮಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಅವರು ಸುಟ್ಟು ಕರಕಲಾಗಿದ್ದರು.
ಪೋಷಕರ ವಿರೋಧದ ನಡುವೆಯೇ ಇವರು ವಿವಾಹವಾಗಿದ್ದರು ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಹ ಕಾರ್ಮಿಕರು ಪೊಲೀಸರಿಗೆ ತಿಳಿಸಿದ್ದಾರೆ. ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications