ಪದ್ಮಭೂಷಣ ಡಾ. ಎನ್. ಶೇಷಗಿರಿ ಅವರ ನೆನಪು

ಬೆಂಗಳೂರಿನ ಬನಶಂಕರಿಯಲ್ಲಿರುವ ಚಿತಾಗಾರದಲ್ಲಿ ಮೇ 29, 2013ರ ಬುಧವಾರ ಮಧ್ಯಾಹ್ನ 2 ಗಂಟೆ ನಂತರ ಮೃತರ ಅಂತ್ಯಕ್ರಿಯೆಯನ್ನು ಧಾರ್ಮಿಕ ವಿಧಿವಿಧಾನಗಳಿಂದ ನೆರವೇರಿಸಲಾಗಿದೆ.
ರಾಷ್ಟ್ರೀಯ ಸೂಚನಾ ಕೇಂದ್ರದ (ಎನ್ ಐಸಿ) ಇಂದು ದಿನನಿತ್ಯದ ಸರ್ಕಾರಿ ವೆಬ್ ತಾಣಗಳ ಜಾಲವಾಗಿ ಬೆಳೆದಿದೆ. ಇದರ ಹಿಂದಿನ ರುವಾರಿ ಬೆಂಗಳೂರಿನ ಶೇಷಗಿರಿಯವರು. ಡಾ. ಎನ್. ಶೇಷಗಿರಿ ಅವರು ದೇಶದಾದ್ಯಂತ ಕಂಪ್ಯೂಟರ್ ನೆಟ್ ವರ್ಕ್ ಅನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಶೇಷಗಿರಿ ಅವರ ದೂರದೃಷ್ಟಿಯ ಫಲವಾಗಿ ಎನ್ ಐಸಿ ನೆಟ್ ರೂಪುಗೊಂಡಿತ್ತು. ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಗೆ ಸಂಬಂಧಿಸಿದ ಹಲವಾರು ನೀತಿಗಳನ್ನು ಸರ್ಕಾರಕ್ಕಾಗಿ ಸಿದ್ಧಪಡಿಸಿಕೊಟ್ಟ ಹಿರಿಮೆಯೂ ಇವರಿಗೆ ಸಲ್ಲುತ್ತದೆ.
ಭಾರತೀಯ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ (ಎಸ್ ಟಿಪಿಐ) ಅನ್ನು ದೇಶದಲ್ಲಿ ಸ್ಥಾಪಿಸುವಲ್ಲಿ ಇವರ ಕೊಡುಗೆ ಅತ್ಯಮೂಲ್ಯ. ಎಸ್ ಟಿಪಿಐನ ಫಲವಾಗಿಯೇ ಭಾರತದ ಸಾಫ್ಟ್ ವೇರ್ ರಫ್ತಿನಲ್ಲಿ ಗಮನಾರ್ಹ ಏರಿಕೆ ದಾಖಲಾಗಿದ್ದು ಇಲ್ಲಿ ಸ್ಮರಣೀಯ.
ಡಾ. ಎನ್. ಶೇಷಗಿರಿ ಅವರು ದೇಶದಲ್ಲಿ ಇ- ಆಡಳಿತವನ್ನು ಉತ್ತೇಜಿಸಿದ ಪ್ರಮುಖ ಪ್ರವರ್ತಕರೆನಿಸಿದ್ದಾರೆ. ದೇಶದಲ್ಲಿ ಇ-ಆಡಳಿತವನ್ನು ಜಾರಿಗೆ ತರಬೇಕೆನ್ನುವುದು ಅವರ ಮಹೋನ್ನತ ಕನಸಾಗಿತ್ತು. ಇದಕ್ಕಾಗಿಯೇ ಅವರು ರೂಪಿಸಿದ ಹಲವಾರು ‘ಅಪ್ಲಿಕೇಷನ್'ಗಳಿಂದಾಗಿಯೇ ಇಂದು ದೇಶದಲ್ಲಿ ಇ-ಆಡಳಿತ ದಿನನಿತ್ಯದ ಆಡಳಿತದಲ್ಲಿ ಹಾಸುಹೊಕ್ಕಾಗಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಪದವಿ ಪಡೆದ ನಂತರ ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್(TIFR) ನಂತರ ಮಾಹಿತಿ ಯೋಜನಾ ಇಲಾಖೆ, ಎಲೆಕ್ಟ್ರಾನಿಕ್ ಆಯೋಗದ ಭಾಗವಾದರು. NICಯಲ್ಲಿ 25 ವರ್ಷ ಕರ್ತವ್ಯ ನಿರ್ವಹಿಸಿದ ನಂತರ ನಿವೃತ್ತಿ ಪಡೆದ ಶೇಷಗಿರಿ ಅವರು ಎಚ್ ಸಿಎಲ್ ಟೆಕ್ನಾಲಜೀಸ್ ಸಂಸ್ಥೆಗೆ ತಾಂತ್ರಿಕ ಸಲಹೆಗಾರರಾಗಿದ್ದರು.
ಡಾ. ಎನ್. ಶೇಷಗಿರಿ ಅವರು ಪತ್ನಿ, ಓರ್ವ ಮಗ ಮತ್ತು ಮಗಳು ಹಾಗೂ ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಆದರೆ, ಶೇಷಗಿರಿ ಅವರು ಹರಿಡಿರುವ ಜ್ಞಾನ ಜಾಲ ಅಜರಾಮರವಾಗಿ ಉಳಿಯಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications