ಚಿಲ್ಲರೆ ಹಣಕ್ಕಾಗಿ ಐದು ಕೊಲೆ, ಸೈಕೋ ಕಿಲ್ಲರ್ ಬಂಧನ

ಬುಧವಾರ ಮೈಸೂರಿನ ಮಂಡಿ ಠಾಣಾ ಪೊಲೀಸರು, ಶಾಂತಿನಗರ ನಿವಾಸಿ ಕೈಸರ್ (24) ಹಾಗೂ ಆತನ ಸಹಚರ ಹರೀಶ್(26) ಬಂಧಿತರು. ನಿರುದ್ಯೋಗಿಯಾಗಿದ್ದ ಕೈಸರ್, ಕುಡಿತ ಸೇರಿದಂತೆ ದುಶ್ಚಟಕ್ಕೆ ಬಲಿಯಾಗಿದ್ದ. ಹಣ ಗಳಿಸಲು ಈತ ಕೊಲೆ ಮಾಡುತ್ತಿದ್ದ ಎಂದು ನಗರ ಪೊಲೀಸ್ ಆಯುಕ್ತ ಕೆ.ಎಲ್.ಸುಧೀರ್ ಹೇಳಿದ್ದಾರೆ.
ಬಂಧಿತ ಕೈಸರ್ ಮತ್ತು ಹರೀಶ್ ಮೇ 19ರಂದು ಮೈಸೂರಿನ ಆರ್ಎಂಸಿ ಬಳಿ, ಕೂಲಿ ಕಾರ್ಮಿಕನ ಜೊತೆ ಜಗಳವಾಡಿ, ಆತನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದರು. ಇವರಿಬ್ಬರ ಮೇಲೆ ಮೈಸೂರಿನ ವಿವಿಧ ಠಾಣೆಗಳಲ್ಲಿ ಐದಕ್ಕೂ ಹೆಚ್ಚು ಕೊಲೆ ಪ್ರಕರಣಗಳು ದಾಖಲಾಗಿವೆ.
ಕೈಸರ್ ಓರ್ವ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದಲ್ಲದೆ, ನೂರು ರೂಪಾಯಿಗಳಿಗಾಗಿಯೂ ಕೊಲೆ ಮಾಡಿದ್ದೇನೆ ಎಂದು ಪೊಲೀಸರು ಹೇಳಿದ್ದಾರೆ. ಕೈಸರ್ ಮೇಲೆ ಉದಯಗಿರಿ, ಲಷ್ಕರ್, ಹಾಗೂ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣಗಳು ದಾಖಲಾಗಿದ್ದವು.
ಹರೀಶ್ ಸಹ ಕೈಸರ್ ಮಿತ್ರನಾಗಿದ್ದು ಕೊಲೆ ಪ್ರಕರಣಗಳಲ್ಲಿ ಆತನಿಗೆ ಸಹಾಯ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜನರ ಪರಿಚಯ ಮಾಡಿಕೊಂಡು ಸ್ನೇಹ ಸಂಪಾದಿಸಿ, ಕುಡಿದ ಮತ್ತಿನಲ್ಲಿ ಅವರನ್ನು ಕೊಂದು ಹಣ ದೋಚುವುದೇ ಇವರ ಕೆಲಸವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರು ಜೊತೆಯಾಗಿ ಉದಯಗಿರಿ ಠಾಣಾ ವ್ಯಾಪ್ತಿಯ ಕೆ.ಆರ್.ನಗರದ ನಿವಾಸಿ ಲತಾ (40), ಲಷ್ಕರ್ ಠಾಣಾ ವ್ಯಾಪ್ತಿಯಲ್ಲಿ ಚಾಂದ್ ಷರೀಫ್, ಗುಂಡ್ಲುಪೇಟೆಯಲ್ಲಿ ಬಸವಶೆಟ್ಟಿಯನ್ನು ಕೊಲೆ ಮಾಡಿದ್ದರು.
ಹೊಳೆ ನರಸೀಪುರದಲ್ಲಿ ಸೋಮಚಾರಿ ಎಂಬುವವನ್ನು ಕೊಲೆ ಮಾಡಿ ಎರಡು ಸಾವಿರ ರೂಪಾಯಿ ದೋಚಿದ್ದರು. ಇವರ ಬಂಧನದ ಮೂಲಕ ನಗರದಲ್ಲಿ ಒಂಭತ್ತು ತಿಂಗಳಿನಲ್ಲಿ ನಡೆದ ಐದು ಕೊಲೆಗಳ ರಹಸ್ಯ ಬಯಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications