ಯುಪಿ ಸಿಎಂ ಅಖಿಲೇಶ್ ಯಾದವ್ ಕರ್ನಾಟಕ ಭೇಟಿ
ಬೆಂಗಳೂರು, ಮೇ 31 : ಸಮಾಜವಾದಿ ಪಕ್ಷದ ಯುವ ಮುಖಂಡ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮೈಸೂರು ಮತ್ತು ಬೆಂಗಳೂರಿಗೆ ಭೇಟಿ ನೀಡಲಿರುವ ಅವರು, ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಶ್ರೀರಾಮುಲು ಜೊತೆ ಸಹ ಮಾತುಕತೆ ನಡೆಸಲಿದ್ದಾರೆ.
ಉತ್ತಮ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ಅಖಿಲೇಶ್ ಯಾದವ್ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಜಯ ಸಾಧಿಸಿದ ಮಾಜಿ ಅರಣ್ಯ ಸಚಿವ ಮತ್ತು ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲು ಅಖಿಲೇಶ್ ಯಾದವ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಅಖಿಲೇಶ್ ಯಾದವ್ ಆಗಮಿಸಿರಲಿಲ್ಲ. ಆದ್ದರಿಂದ ಈಗ ಆಗಮಿಸಿ ರಾಜ್ಯದ ಏಕೈಕ ಸಮಾಜವಾದಿ ಪಕ್ಷದ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ತಾವು ಓದಿದ ಮೈಸೂರಿನ ಎಸ್ .ಜೆ.ಆರ್. ಸಿ ಕಾಲೇಜಿಗೂ ಅವರು ಭೇಟಿ ನೀಡಲಿದ್ದಾರೆ.
ಜೂನ್ 13ರಂದ ರಾಜ್ಯಕ್ಕೆ ಆಗಮಿಸುವ ಆಖಿಲೇಶ್ ಯಾದವ್ ಚನ್ನಪಟ್ಟಣ, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಅವರು, ಬಿ.ಶ್ರೀರಾಮುಲು ಅವರ ಜೊತೆ ಸಹ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಜೂನ್ 13ರಂದು ಆಗಮನ
ಮೂರು ದಿನಗಳ ಪ್ರವಾಸಕ್ಕಾಗಿ ಜೂ.13ರಂದು ಅಖಿಲೇಶ್ ಯಾದವ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಜೂನ್ 15 ರವರೆಗೂ ಅವರು ಕರ್ನಾಟಕದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಎರಡು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಯೋಗೇಶ್ವರ್ ಗೆ ಅಭಿನಂದನೆ
ಜೂ.13ರಂದು ಚನ್ನಪಟ್ಟಣಕ್ಕೆ ತೆರಳಿ ಸಮಾಜವಾದಿ ಪಕ್ಷದ ಏಕೈಕ ಶಾಸಕ ಸಿ.ಪಿ.ಯೋಗೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಮೈಸೂರಿಗೆ ಅಖಿಲೇಶ್
ಜೂ.14ರಂದು ಅಖಿಲೇಶ್ ಯಾದವ್ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಅವರು ಇಂಜಿನಿಯರಿಂಗ್ ಓದಿದ ಶ್ರೀ ಜಯಚಾಮರಾಜೇಂದ್ರ ಕಾಲೇಜಿಗೆ ತೆರಳಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಶ್ರೀರಾಮುಲು ಜೊತೆ ಸಭೆ
ಜೂನ್ 14 ರಂದು ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಜೊತೆ ಅಖಿಲೇಶ್ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಿದ್ದಾರೆ. ಇವುಗಳ ಅಂತಿಮ ತೀರ್ಮಾನ ಪಕ್ಷದ ನಾಯಕ ಮುಲಾಯಮ್ ಸಿಂಗ್ ಯಾದವ್ ಅವರ ಮೇಲೆ ನಿಂತಿದೆ.

ಬೆಂಗಳೂರು- ಮೈಸೂರು ರೋಡ್ ಶೋ
ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಅಖಿಲೇಶ್ ಯಾದವ್ ರೋಡ್ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯೂ ಇದೆ. ಆದರೆ, ಇದು ಕೊನೆ ಕ್ಷಣದಲ್ಲಿ ರದ್ದಾಗಬಹುದು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications