ಕುರಿಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ

ಟಿವಿ9 ಕನ್ನಡ ಸುದ್ದಿ ವಾಹಿನಿಯೊಂದಿಗೆ ಶುಕ್ರವಾರ(ಮೇ.31) ಮಧ್ಯಾಹ್ನ 11.45ರ ಸುಮಾರಿಗೆ ಮಾತನಾಡುತ್ತಾ, ಸರ್ಕಾರಕ್ಕೆ ಕೆಲವು ಕಿವಿಮಾತುಗಳನ್ನು ನೀಡಿದ್ದಾರೆ.
ಕುರಿ ಸರ್ವಶ್ರೇಷ್ಠವಾದ ಪ್ರಾಣಿ, ಗೋವಿಗಿಂತಲೂ ಶ್ರೇಷ್ಠವಾಗಿದೆ. ಪುರಾಣಗಳಲ್ಲಿ ಕುರಿಯ ಮಹತ್ವದ ಬಗ್ಗೆ ಉಲ್ಲೇಖವಿದೆ. ಕುರಿ ಹೆಸರನ್ನು ಜಾತಿ ಆಧಾರ ಮೇಲೆ ಸೂಚಿಸುತ್ತಿಲ್ಲ. ಕುರಿ ದೀನದಲಿತರ ನಿತ್ಯ ಸಂಗಾತಿ ಹಾಗೂ ದೈನಂದಿನ ಬದುಕಿನ ಆಸರೆಯಾಗಿದೆ ಎಂದು ನಿರಂಜನಾನಂದ ಪುರಿ ಶ್ರೀಗಳು ಹೇಳಿದ್ದಾರೆ.
ಕಡಿಮೆ ದರದಲ್ಲಿ ಮದ್ಯ ವಿತರಣೆ ಯೋಜನೆ ಜಾರಿಗೆ ತರಲು ಸಿದ್ದರಾಮಯ್ಯ ಅವರು ಯೋಜಿಸಿರುವುದು ಸರಿಯಾಗಿದೆ. ಕಳಪೆ ಮದ್ಯ ಸೇವಿಸಿ ಅನೇಕ ಜನ ಸಾವನ್ನಪ್ಪುದು ಇದರಿಂದ ತಪ್ಪುತ್ತದೆ. ಆದರೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮದ್ಯವನ್ನು ನಿಷೇಧಿಸುವುದಾದರೆ ಸಂಪೂರ್ಣವಾಗಿ ನಿಷೇಧಿಸಲಿ ಎಂದಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠ, ದೇಗುಲ ವಿವಾದ ಈ ಹಿಂದಿನಿಂದಲೂ ಇದೆ. ಈ ಗೊಂದಲ ಪರಿಹಾರಕ್ಕಾಗಿ ಸರ್ಕಾರ ಯತ್ನಿಸಬೇಕು. ಉಡುಪಿ ದೇಗುಲ ಹಾಗೂ ಗೋಕರ್ಣ ದೇಗುಲಗಳ ಬಗ್ಗೆ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಹಿಂದುಳಿದ ಮಠಗಳ ಬೆಂಬಲ ಇದೆ ಎಂದು ನಿರಂಜನಾಪುರಿ ಸ್ವಾಮೀಜಿ ಹೇಳಿದ್ದಾರೆ.
ಸ್ವಾಮೀಜಿ ಬಗ್ಗೆ ಒಂದಿಷ್ಟು: ನಿರಂಜನಾನಂದ ಪುರಿ ಶ್ರೀಗಳು ಹಾವೇರಿಯ ಕಾಗಿನೆಲೆಯಲ್ಲಿರುವ ದಾಸ ಶ್ರೇಷ್ಠ ಕನಕರ ಪೀಠದ ಹಾಲಿ ಅಧ್ಯಕ್ಷರಾಗಿದ್ದಾರೆ. ಬೀರೆಂದ್ರ ಕೇಶವ ತಾರಕಾನಂದ ಪುರಿ ಸ್ವಾಮೀಜಿಗಳು ಉತ್ತರಾಧಿಕಾರಿಯನ್ನು ನೇಮಿಸಿದೆ ಸ್ವರ್ಗಸ್ಥರಾಗಿದ್ದರು.
ನಂತರ 2006ರಲ್ಲಿ ಕನಕ ಗುರುಪೀಠ ಟ್ರಸ್ಟ್ ನವರು ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಎಚ್ ವಿಶ್ವನಾಥ್ ಅವರ ನೇತೃತ್ವದ ಆಯ್ಕೆ ಸಮಿತಿ ಹಾಲಿ ಸ್ವಾಮೀಜಿಗಳನ್ನು ಪೀಠಾಧಿಪತಿಗಳನ್ನಾಗಿ ಆಯ್ಕೆ ಮಾಡಿದ್ದರು.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹರ್ತಿಕೋಟೆ ಮೂಲದವರಾದ ನಿರಂಜನಾನಂದ ಪುರಿಗಳು, ಬನಾರಸ್ ನ ಸಂಪೂರ್ಣಾನಂದ ಸಂಸ್ಕೃತ ವಿದ್ಯಾಪೀಠದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1992ರಲ್ಲಿ ಸ್ಥಾಪನೆಯಾದ ಕಾಗಿನೆಲೆ ಮಹಾಸಂಸ್ಥಾನ, ಬೆಂಗಳೂರು, ಮೈಸೂರು, ಗುಲ್ಬರ್ಗಾ ಹಾಗೂ ಬೆಳಗಾವಿಯಲ್ಲಿ ತನ್ನ ಶಾಖಾ ಮಠಗಳನ್ನು ಹೊಂದಿದೆ. ಈ ಶಾಖಾ ಮಠಗಳ ಸ್ವಾಮೀಜಿಗಳು ಮುಖ್ಯಮಠದ ಗುರುಪೀಠಾಧಿಪತಿಯಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶವಿರುತ್ತದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications