ಕುರಿಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ

ಟಿವಿ9 ಕನ್ನಡ ಸುದ್ದಿ ವಾಹಿನಿಯೊಂದಿಗೆ ಶುಕ್ರವಾರ(ಮೇ.31) ಮಧ್ಯಾಹ್ನ 11.45ರ ಸುಮಾರಿಗೆ ಮಾತನಾಡುತ್ತಾ, ಸರ್ಕಾರಕ್ಕೆ ಕೆಲವು ಕಿವಿಮಾತುಗಳನ್ನು ನೀಡಿದ್ದಾರೆ.
ಕುರಿ ಸರ್ವಶ್ರೇಷ್ಠವಾದ ಪ್ರಾಣಿ, ಗೋವಿಗಿಂತಲೂ ಶ್ರೇಷ್ಠವಾಗಿದೆ. ಪುರಾಣಗಳಲ್ಲಿ ಕುರಿಯ ಮಹತ್ವದ ಬಗ್ಗೆ ಉಲ್ಲೇಖವಿದೆ. ಕುರಿ ಹೆಸರನ್ನು ಜಾತಿ ಆಧಾರ ಮೇಲೆ ಸೂಚಿಸುತ್ತಿಲ್ಲ. ಕುರಿ ದೀನದಲಿತರ ನಿತ್ಯ ಸಂಗಾತಿ ಹಾಗೂ ದೈನಂದಿನ ಬದುಕಿನ ಆಸರೆಯಾಗಿದೆ ಎಂದು ನಿರಂಜನಾನಂದ ಪುರಿ ಶ್ರೀಗಳು ಹೇಳಿದ್ದಾರೆ.
ಕಡಿಮೆ ದರದಲ್ಲಿ ಮದ್ಯ ವಿತರಣೆ ಯೋಜನೆ ಜಾರಿಗೆ ತರಲು ಸಿದ್ದರಾಮಯ್ಯ ಅವರು ಯೋಜಿಸಿರುವುದು ಸರಿಯಾಗಿದೆ. ಕಳಪೆ ಮದ್ಯ ಸೇವಿಸಿ ಅನೇಕ ಜನ ಸಾವನ್ನಪ್ಪುದು ಇದರಿಂದ ತಪ್ಪುತ್ತದೆ. ಆದರೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮದ್ಯವನ್ನು ನಿಷೇಧಿಸುವುದಾದರೆ ಸಂಪೂರ್ಣವಾಗಿ ನಿಷೇಧಿಸಲಿ ಎಂದಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠ, ದೇಗುಲ ವಿವಾದ ಈ ಹಿಂದಿನಿಂದಲೂ ಇದೆ. ಈ ಗೊಂದಲ ಪರಿಹಾರಕ್ಕಾಗಿ ಸರ್ಕಾರ ಯತ್ನಿಸಬೇಕು. ಉಡುಪಿ ದೇಗುಲ ಹಾಗೂ ಗೋಕರ್ಣ ದೇಗುಲಗಳ ಬಗ್ಗೆ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಹಿಂದುಳಿದ ಮಠಗಳ ಬೆಂಬಲ ಇದೆ ಎಂದು ನಿರಂಜನಾಪುರಿ ಸ್ವಾಮೀಜಿ ಹೇಳಿದ್ದಾರೆ.
ಸ್ವಾಮೀಜಿ ಬಗ್ಗೆ ಒಂದಿಷ್ಟು: ನಿರಂಜನಾನಂದ ಪುರಿ ಶ್ರೀಗಳು ಹಾವೇರಿಯ ಕಾಗಿನೆಲೆಯಲ್ಲಿರುವ ದಾಸ ಶ್ರೇಷ್ಠ ಕನಕರ ಪೀಠದ ಹಾಲಿ ಅಧ್ಯಕ್ಷರಾಗಿದ್ದಾರೆ. ಬೀರೆಂದ್ರ ಕೇಶವ ತಾರಕಾನಂದ ಪುರಿ ಸ್ವಾಮೀಜಿಗಳು ಉತ್ತರಾಧಿಕಾರಿಯನ್ನು ನೇಮಿಸಿದೆ ಸ್ವರ್ಗಸ್ಥರಾಗಿದ್ದರು.
ನಂತರ 2006ರಲ್ಲಿ ಕನಕ ಗುರುಪೀಠ ಟ್ರಸ್ಟ್ ನವರು ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಎಚ್ ವಿಶ್ವನಾಥ್ ಅವರ ನೇತೃತ್ವದ ಆಯ್ಕೆ ಸಮಿತಿ ಹಾಲಿ ಸ್ವಾಮೀಜಿಗಳನ್ನು ಪೀಠಾಧಿಪತಿಗಳನ್ನಾಗಿ ಆಯ್ಕೆ ಮಾಡಿದ್ದರು.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹರ್ತಿಕೋಟೆ ಮೂಲದವರಾದ ನಿರಂಜನಾನಂದ ಪುರಿಗಳು, ಬನಾರಸ್ ನ ಸಂಪೂರ್ಣಾನಂದ ಸಂಸ್ಕೃತ ವಿದ್ಯಾಪೀಠದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1992ರಲ್ಲಿ ಸ್ಥಾಪನೆಯಾದ ಕಾಗಿನೆಲೆ ಮಹಾಸಂಸ್ಥಾನ, ಬೆಂಗಳೂರು, ಮೈಸೂರು, ಗುಲ್ಬರ್ಗಾ ಹಾಗೂ ಬೆಳಗಾವಿಯಲ್ಲಿ ತನ್ನ ಶಾಖಾ ಮಠಗಳನ್ನು ಹೊಂದಿದೆ. ಈ ಶಾಖಾ ಮಠಗಳ ಸ್ವಾಮೀಜಿಗಳು ಮುಖ್ಯಮಠದ ಗುರುಪೀಠಾಧಿಪತಿಯಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶವಿರುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications