ಎಸ್ಸಾರ್ ಪಾಟೀಲ್ ಕ್ಷಮೆಯಾಚಿಸಿದ ಪೈ, ಶಾ

65 ವರ್ಷ ವಯಸ್ಸಿನ ಮಂತ್ರಿಯನ್ನು ಐಟಿ ಬಿಟಿ ಸಚಿವರಾಗಿ ಪಡೆದು ನಾವು ಏನು ಪ್ರಗತಿ ಸಾಧಿಸಲು ಸಾಧ್ಯ ಎಂದು ಈ ಇಬ್ಬರು ಗಣ್ಯರು ಪ್ರಶ್ನೆ ಎತ್ತಿದ್ದರು. ಇದಕ್ಕೆ ಎಸ್ ಆರ್ ಪಾಟೀಲ್ ಅವರು ಖಡಕ್ ಉತ್ತರ ನೀಡಿದ್ದರು.
ಶುಕ್ರವಾರ (ಮೇ.31) ವಿಧಾನಸೌಧದಲ್ಲಿ ಐಟಿ ಬಿಟಿ ಸಚಿವ ಎಸ್ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಪೈ ಹಾಗೂ ಶಾ ಅವರು ICT ಸಮೂಹದ ಪರವಾಗಿ ಐಟಿ ರೋಡ್ ಮ್ಯಾಪ್ 2020 ವರದಿಯನ್ನು ಸಲ್ಲಿಸಿದರು.
ಗುಲ್ಬರ್ಗಾ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ 2ನೇ ಹಂತದ ನಗರಗಳಿಗೂ ಐಟಿ, ಬಿಟಿ ಉದ್ಯಮಗಳನ್ನು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದರು.
ಪಾಟೀಲ್ ಸವಾಲು: ಎಸ್ಸೆಂ ಕೃಷ್ಣ ಅವರು 75 ವರ್ಷದ ಇಳಿ ವಯಸ್ಸಿನಲ್ಲಿ ಬೆಂಗಳೂರನ್ನು ಐಟಿ ರಾಜಧಾನಿ ದರ್ಜೆಗೆ ಏರಿಸ ಬಹುದಾದರೆ ನಾನು 65 ವರ್ಷ ವಯಸ್ಸಿನವ ನಾನು ಏಕೆ ಐಟಿ ಕ್ಷೇತ್ರ ಉದ್ಧಾರ ಮಾಡಲು ಸಾಧ್ಯವಿಲ್ಲ. ವಯಸ್ಸಿಗೂ ಹುದ್ದೆಗೂ ತಾಳೆ ಹಾಕಿ ತೂಗುವ ಪ್ರವೃತ್ತಿ ಬಿಡಿ ನನಗೂ ಐಟಿ ಕ್ಷೇತ್ರದ ಪರಿಚಯವಿದೆ
2020ರೊಳಗೆ ರಾಜ್ಯದ ಸಾಫ್ಟ್ ವೇರ್ ರಫ್ತು ಪ್ರಮಾಣವನ್ನು 4,00,000 ಕೋಟಿ ರು ಗೆ ಏರಿಸುವ ಗುರಿ ಹೊಂದಿದ್ದೇನೆ. ಸಿದ್ದರಾಮಯ್ಯ ಅವರು ನನ್ನ ಮೇಲೆ ನಂಬಿಕೆ ಇಟ್ಟು ಈ ಖಾತೆ ನೀಡಿದ್ದಾರೆ. ನನ್ನ ಉತ್ಸಾಹಕ್ಕೆ ಭಂಗ ತರಬೇಡಿ ಎಂದು ಪಾಟೀಲ್ ಹೇಳಿದ್ದಾರೆ. ಸದ್ಯಕ್ಕೆ ರಾಜ್ಯದ ಸಾಫ್ಟ್ ವೇರ್ ರಫ್ತು ಪ್ರಮಾಣ 1,35,000 ಕೋಟಿ ರು ನಷ್ಟಿದೆ ಎಂದಿದ್ದರು.
ಬೆಂಗಳೂರು ಕೇಂದ್ರಿಕೃತ ಐಟಿ -ಬಿಟಿ ಉದ್ಯಮವನ್ನು ಎರಡನೇ ಹಾಗೂ ಮೂರನೇ ಸ್ತರದ ನಗರಗಳಿಗೆ ಕೊಂಡೊಯ್ಯುವುದು ನನ್ನ ಗುರಿ. ಸಾಮಾನ್ಯ ಜನರ ಜೊತೆ ಐಟಿ ಸಂಪರ್ಕ ಸಾಧಿಸಲು ಯತ್ನಿಸುತ್ತೇನೆ ಎಂದು ಪಾಟೀಲ್ ಭರವಸೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications