ವಿಧಾನ ಪರಿಷತ್ ಕಲಾಪ: ಪ್ರಶ್ನೋತ್ತರ ವೇಳೆ ಮಾಯ

ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿಗೆ ಉಭಯ ಸದನ ಉದ್ದೇಶಿಸಿ ಮಾತನಾಡುವ ಗೌರವ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರಿಗೆ ಸಿಗುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಕಳೆದ ಫೆ.4 ರಂದು ರಾಜ್ಯಪಾಲರು ಭಾಷಣ ಮಾಡಿದ್ದರು.
ಈಗ ಸುಮಾರು 9 ವರ್ಷಗಳ ನಂತರ ಅಧಿಕಾರ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ಉಭಯ ಸದನಗಳನ್ನು ನಿಭಾಯಿಸುವ ತಂತ್ರಗಾರಿಕೆಯೂ ಬೇಕಿದೆ.
ಜೂ.3ರಂದು ವಿಧಾನಮಂಡಲದ ಉಭಯ ಸದನ ಉದ್ದೇಶಿಸಿ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ನಂತರ ವಿಧಾನ ಪರಿಷತ್ತು ಸಭೆ ಸೇರಿ ರಾಜ್ಯಪಾಲರ ಭಾಷಣದ ಪ್ರತಿ ಮಂಡನೆ ಮಾಡಿ ಸದನವನ್ನು ಮುಂದೂಡಲಾಗುತ್ತದೆ ಎಂಡು ವಿಧಾನಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಹೇಳಿದ್ದಾರೆ.
ಜೂ.4 ರಿಂದ ಜೂ. 7ರವರೆಗೆ ಪರಿಷತ್ ಕಲಾಪ ನಡೆಯಲಿದೆ. ರಾಜ್ಯಪಾಲರ ಸಮಯಾವಕಾಶ ಕೊರತೆಯಿಂದ ಈ ಬಾರಿ ಪ್ರಶ್ನೋತ್ತರ ಅವಧಿ ಇರುವುದಿಲ್ಲ. ಆದರೆ, ವಿಧೇಯಕಗಳ ಮಂಡನೆಗೆ ಅವಕಾಶ ಇರುತ್ತದೆ ಎಂದು ಶಂಕರಮೂರ್ತಿ ಹೇಳಿದರು.
ಪ್ರಶ್ನೋತ್ತರ ವೇಳೆ ಮೊಟಕುಗೊಳಿಸಿರುವುದರಿಂದ ನಿಯಮ 330 ಎ ಅಡಿಯಲ್ಲಿ ಸದಸ್ಯರು ವಿಶೇಷ ಪ್ರಸ್ತಾವ ಮಂಡಿಸಲು ಅವಕಾಶ ಇರುತ್ತದೆ.
ಕರ್ನಾಟಕ ಭೂ ಕಂದಾಯ ತಿದ್ದುಪಡಿ 2012 ವಿಧೇಯಕ ಉಭಯ ಸದನಗಳಲ್ಲಿ ಮಂಡಿಸಿದ ಬಳಿಕ ರಾಜ್ಯಪಾಲರ ಅಂಗೀಕಾರಕ್ಕೆ ಕಳಿಸಲಾಗುತ್ತದೆ. ಈ ಬಾರಿ ಮಂಡನೆಯಾಗುವ ನಿರೀಕ್ಷೆಯಿದೆ.
ವಿಧಾನಪರಿಷತ್ ಕಲಾಪ ವಂದೇಮಾತರಂ ಗೀತೆಯೊಂದಿಗೆ ಆರಂಭವಾಗಲಿದ್ದು ಜೂ.7ರಂದು ಜನಗಣ ಮನ ರಾಷ್ಟ್ರಗೀತೆಯೊಂದಿಗೆ ಸಮಾಪ್ತಿಗೊಳ್ಳಲಿದೆ ಎಂದು ಸಭಾಪತಿ ಡಿ.ಎಚ್ ಶಂಕರಮೂರ್ತಿ ಹೇಳಿದರು.
ಕೆಳಮನೆ (ವಿಧಾನಸಭೆ) ಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸಭಾಧ್ಯಕ್ಷರಾಗಿದ್ದಾರೆ. ಮೇಲ್ಮನೆ (ವಿಧಾನ ಪರಿಷತ್)ಗೆ ಡಿ. ಎಚ್ ಶಂಕರಮೂರ್ತಿ ಅವರು ಸಭಾಪತಿಯಾಗಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications