ಬೆಂಗಳೂರು-ಮೈಸೂರು ನಡುವೆ ಐಷಾರಾಮಿ ಫ್ಲೈ ಬಸ್

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫ್ಲೈ ಬಸ್ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಮೊದಲ 15 ದಿನಗಳ ಕಾಲ ಒಂದು ಬಸ್ ಓಡಿಸುವ ಮೂಲಕ ಪರಿಕ್ಷಾರ್ಥ ಸಂಚಾರ ನಡೆಸಲಿದ್ದೇವೆ. ನಂತರ ಹೆಚ್ಚಿನ ಬಸ್ ಗಳು ಸಂಚರಿಸಲಿವೆ ಎಂದು ಹೇಳಿದರು.
ಫ್ಲೈ ಬಸ್ ಸೇವೆಯಲ್ಲಿ ವೋಲ್ವೋ ಮಲ್ಟಿ ಆಕ್ಷಲ್ ಬಸ್ ಗಳು ಬೆಂಗಳೂರು ವಿಮಾನ ನಿಲ್ದಾಣ ಮತ್ತು ಮೈಸೂರಿನ ನಡುವೆ ಸಂಚರಿಸಲಿವೆ. ಬಸ್ ಗಳು ಸುಖಾಸೀನ ಆಸನಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ಇಷ್ಟವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಏನೇನಿದೆ : ಇದೊಂದು ಐಷಾರಾಮಿ ಬಸ್ ಆಗಿದ್ದು, ಪುಟ್ಟ ಅಡುಗೆ ಮನೆ, ರಾಸಾಯನಿಕ ಶೌಚಾಲಯವನ್ನು ಹೊಂದಿದೆ. ಪ್ರತಿ ಸೀಟಿನ ಹಿಂಭಾಗದಲ್ಲಿ ಟಿವಿ ವ್ಯವಸ್ಥೆ ಇದೆ, ಪ್ರಯಾಣಿಕರಿಗೆ ಕುಳಿತಲ್ಲಲಿಗೆ ಕುಡಿಯುವ ನೀರು ಸರಬರಾಜು ಆಗಲಿದೆ.
ನಾನ್ ಸ್ಟಾಪ್ : ಫ್ಲೈ ಬಸ್ ಮೈಸೂರು ಮತ್ತು ಬೆಂಗಳೂರಿನಲ್ಲಿ ಬಸ್ ಮಾತ್ರ ನಿಲ್ಲಲಿದೆ. ಕೆಂಗೇರಿ, ನೆಲಮಂಗಲ, ಹೆಬ್ಬಾಳದ ಮೂಲಕ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದೆ. ಸದ್ಯಕ್ಕೆ ಬಸ್ ದರ 1000 ರೂ ಎಂದು ನಿಗದಿ ಪಡಿಸಲಾಗಿದೆ. ಪ್ರಯಾಣಿಕರ ಪ್ರತಿಕ್ರಿಯೆ ನಂತರ ದರ ಪರಿಷ್ಕರಣೆ ಮಾಡುವ ಆಲೋಚನೆ ಇದೆ.
ಬೇರೆ ಸ್ಥಳಗಳಿಗೆ ವಿಸ್ತರಣೆ : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಂಗಳೂರು, ಕೊಡಗು ಮತ್ತು ಮೈಸೂರಿನಿಂದ ಹೆಚ್ಚಿನ ಪ್ರಯಾಣಿಕರು ಆಗಮಿಸುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಸೆಪ್ಟೆಂಬರ್ ತಿಂಗಳಿನಿಂದ ಫ್ಲೈ ಬಸ್ ಯೋಜನೆಯನ್ನು ಇತರ ನಗರಗಳಿಗೂ ವಿಸ್ತರಿಸುವ ಆಲೋಚನೆ ಇದೆ ಎಂದು ಮಂಜುನಾಥ್ ತಿಳಿಸಿದರು.
ಸಮಯ ಉಳಿತಾಯ : ಮೈಸೂರಿನಿಂದ ಬೆಂಗಳೂರಿನ ಬಸ್ ನಿಲ್ದಾಣಕ್ಕೆ ಬಂದು, ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಸಂಚರಿಸಬೇಕಾಗಿತ್ತು. ಆದರೆ ಫ್ಲೈ ಬಸ್ ಸೇವೆಯಿಂದಾಗಿ ಸಮುಯದ ಉಳಿತಾಯವಾಗಲಿದೆ. ಹಾಗೂ ಜನರು ನೇರವಾಗಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.
ಒಟ್ಟಾರೆ ಮೈಸೂರಿನ ಜನರ ಬಹುದಿನಗಳ ಕನಸು ಆಗಸ್ಟ್ ನಲ್ಲಿ ನನಸಾಗಲಿದೆ. ಜನರು ಕೆಎಸ್ಆರ್ ಟಿಸಿಯ ಈ ಫ್ಲೈ ಬಸ್ ಸೇವೆಗೆ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದು ನೋಡಬೇಕು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications