ಫಿಕ್ಸಿಂಗ್: ದಾವೂದ್ ಜತೆ ಶ್ರೀಶಾಂತ್ ಸಹ ಆರೋಪಿ
ಮುಂಬೈ, ಜೂ.4: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ದೆಹಲಿ ಪೊಲೀಸರು ಮೋಕಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಛೋಟಾ ಶಕೀಲ್ ಅವರನ್ನು ಶ್ರೀಶಾಂತ್ ಜೊತೆ ಸಹ ಆರೋಪಿಗಳಾಗಿ ದೆಹಲಿ ಪೊಲೀಸರು ಹೆಸರಿಸಿದ್ದಾರೆ.
ಫಿಕ್ಸಿಂಗ್ ಪ್ರಕರಣದಲ್ಲಿ ಭೂಗತ ಜಗತ್ತಿನ ಪಾತಕಿಗಳ ನಂಟಿರುವ ಕುರಿತು ಸಂಶಯ ಈ ಹಿಂದೆ ಕೂಡಾ ವ್ಯಕ್ತವಾಗಿತ್ತು. ಬುಕ್ಕಿಗಳು ನಿರಂತರವಾಗಿ ದುಬೈ ಹಾಗೂ ಪಾಕಿಸ್ತಾನದ ಕರಾಚಿಗೆ ಕರೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಶ್ರೀಶಾಂತ್ ಜೊತೆ ಬಂಧನರಾದ ಬುಕ್ಕಿಗಳು ಕೂಡಾ ಈ ಬಗ್ಗೆ ಮಾಹಿತಿ ಹೊರ ಹಾಕಿದ್ದರು.
ಹೀಗಾಗಿ ಪ್ರಕರಣ ಮತ್ತೊಂದು ತಿರುವು ಪಡೆಯುತ್ತಿದ್ದು, ಶ್ರೀಶಾಂತ್ ಮತ್ತು ಸ್ಪಾಟ್ ಫಿಕ್ಸಿಂಗ್ ನಲ್ಲಿ ಬಂಧನಕ್ಕೀಡಾಗಿರುವ ಇತರೆ 25 ಆರೋಪಿಗಳ ವಿರುದ್ಧ ಮೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಈ MCOCAಕಾಯ್ದೆ ಪ್ರಕಾರ ತಪ್ಪೊಪ್ಪಿಗೆ ನೀಡುವ ಆರೋಪಿಗಳು ಅಥವಾ ಸಾಕ್ಷಿಗಳು ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ ಉಪ ಪೊಲೀಸ್ ಆಯುಕ್ತ ಅಥವಾ ಅದೇ ಸ್ಥಾನದ ಅಧಿಕಾರಿಗಳ ಎದುರು ಹಾಜರಾಗಿ ವಿಚಾರಣೆ ಎದುರಿಸಬೇಕಿದೆ. ಇದರಿಂದ ಆರೋಪಿಗಳು ಮತ್ತು ಸಾಕ್ಷಿಗಳು ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಪ್ರಯತ್ನಕ್ಕೆ ಕಡಿವಾಣ ಬೀಳುತ್ತದೆ.
1994ರಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ರಾಜ್ಯದಲ್ಲಿ ಜಾರಿಗೆ ಬಂದ ಮೋಕಾ ಕಾಯ್ದೆ ಯೋಜಿತ ಅಪರಾಧಗಳ ಕುರಿತು ತನಿಖೆ ನಡೆಸಲು ತನಿಖಾಧಿಕಾರಿಗಳಿಗೆ ವಿಶೇಷ ಹಕ್ಕನ್ನು ನೀಡುತ್ತದೆ. ಆರಂಭದಲ್ಲಿ ಈ ಕಾಯ್ದೆಯನ್ನು ಖೋಟಾ ನೋಟು ಚಲಾವಣೆ ಮತ್ತು ಮಂಪರು ಭಯೋತ್ಪಾದನೆ (ಮಾದಕ ವಸ್ತುಗಳ ಅನಧಿಕೃತ ರವಾನೆ ಮತ್ತು ಮಾದಕ ವಸ್ತುಗಳ ಕಾನೂನು ಬಾಹಿರ ಬಳಕೆ)ಯಂತಹ ಅಪರಾಧಗಳಲ್ಲಿ ಬಳಸಲಾಗುತ್ತಿತ್ತು. ಇದೀಗ ಇದೇ ಮೊದಲ ಬಾರಿಗೆ ಕ್ರೀಡಾ ಕ್ಷೇತ್ರದ ಅಪರಾಧಗಳ ಪತ್ತೆಗಾಗಿ ಬಳಕೆ ಮಾಡಲಾಗುತ್ತಿದೆ.
ದಾವೂದ್ ನಂಟು: ಬುಕ್ಕಿಗಳ ಜೊತೆ ಡಿ ಕಂಪನಿ ನಂಟಿರುವ ಬಗ್ಗೆ ಆಗಾಗ್ಗೆ ಕೇಳಿ ಬರುತ್ತಿರುತ್ತದೆ. ಬುಕ್ಕಿ ಟಿಂಕು ಮಂಡಿ ಈ ಬಗ್ಗೆ ಮಾಹಿತಿ ನೀಡಿದ್ದು, 2008ರಲ್ಲೇ ಶ್ರೀಶಾಂತ್ ಮೇಲೆ ದಾವೂದ್ ಇಬ್ರಾಹಿಂ ತಮ್ಮ ಅನೀಶ್ ಕಣ್ಣು ಹಾಕಿ ಬಲಿ ಕಾ ಬಕ್ರಾ ಮಾಡಲು ಸಿದ್ದತೆ ನಡೆಸಿದ್ದರು ಎಂಬ ವಿಷಯ ಸ್ಪಷ್ಟವಾಗಿದೆ.
ಕ್ರಿಕೆಟಿಗರ ಜಾಮೀನು ಅರ್ಜಿ ವಜಾ: ಈ ನಡುವೆ ಜಾಮೀನು ಕೋರಿ ಶ್ರೀಶಾಂತ್, ಅಜಿತ್, ಅಂಕಿತ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಗಳನ್ನು ವಜಾಗೊಳಿಸಿದೆ. ಅಲ್ಲದೆ ಜೂನ್ 18ರವರೆಗೆ ಕ್ರಿಕೆಟಿಗರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications