ಬೆಸ್ಕಾಂ ಮುಂದಿರುವ ಪ್ರಮುಖ ಚಾಲೇಂಜುಗಳು
ಪ್ರಶ್ನೆ : ಬೆಂಗಳೂರನ್ನು ವಿದ್ಯುತ್ ಸಂಪರ್ಕ ವ್ಯವಸ್ಥೆಯ ದಕ್ಷತೆ ಹೆಚ್ಚಿಸಲು ಏನೇನು ಕ್ರಮ ತೆಗೆದುಕೊಳ್ಳಲಾಗಿದೆ?
ಉತ್ತರ : ಬೆಂಗಳೂರಿಗೆ 24 ಗಂಟೆ ವಿದ್ಯುತ್ ಸರಬರಾಜು ಆಗುತ್ತಿದೆ. ನಂಬಿಕಾರ್ಹತೆ ಮತ್ತು ಗುಣಮಟ್ಟ ಹೆಚ್ಚಿಸುವ ಮೂಲಕ ಇಲ್ಲಿನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಹೊಸ ತಂತ್ರಜ್ಞಾನಗಳನ್ನು ಬಳಸಲಾಗುತ್ತಿದೆ. ಬೆಂಗಳೂರಿನಲ್ಲಿ ನೂರು ವರ್ಷಗಳಿಗಿಂತಲೂ ಹಳೆಯ ವಿದ್ಯುತ್ ಸರಬರಾಜು ವ್ಯವಸ್ಥೆಯಿದ್ದು, ಆ ವ್ಯವಸ್ಥೆಯನ್ನು ಉತ್ತಮಪಡಿಸುವತ್ತ ನಿರಂತರ ಕಾರ್ಯ ನಡೆದಿದೆ.
ಇದರ ಜೊತೆಗೆ, ವಿದ್ಯುತ್ ತಂತಿಗಳನ್ನು ಬದಲಾಯಿಸಿ ಭೂಮಿಯೊಳಗೆ ಕೇಬಲ್ಗಳನ್ನು ಅಳವಡಿಸುವ ಕಾರ್ಯವನ್ನು ಬೆಸ್ಕಾಂ ಕೈಗೆತ್ತಿಕೊಂಡಿದೆ. ಅಲ್ಲದೆ, ಜನನಿಬಿಡ ಪ್ರದೇಶದಲ್ಲಿರುವ ಕಂಡಕ್ಟರುಗಳನ್ನು ತೆಗೆದು ಸುರಕ್ಷಿತವಾದ ಸಾಧನಗಳನ್ನು ಅಳವಡಿಸುವ ಮತ್ತು ಸುರಕ್ಷತೆ ಮತ್ತು ನಗರದ ಸೌಂದರ್ಯವನ್ನು ಹೆಚ್ಚಿಸುವ ಕಾರ್ಯ ಭರದಿಂದ ಸಾಗಿದೆ.

ಎಲ್ಲ ಸರ್ವೀಸ್ ಸ್ಟೇಷನ್ಗಳಲ್ಲಿ ಅತ್ಯಾಧುನಿಕ ಸಲಕರಣೆಗಳನ್ನು ಮತ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆ ಇದ್ದ 60 ಸರ್ವೀಸ್ ಸ್ಟೇಷನ್ಗಳಿದ್ದವು. ಈಗ ಅವುಗಳ ಸಂಖ್ಯೆ 160ಕ್ಕೆ ಏರಿಸಲಾಗಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಎಂಥದೇ ತೊಂದರೆ ಇದ್ದರೆ ಕೂಡಲೆ ಪರಿಹಾರ ದೊರಕಿಸಿಕೊಡಲು ಅನುಕೂಲವಾಗಿದೆ. ದಿನದ 24 ಗಂಟೆಗಳ ಕಾಲ 080 22873333 ಸಂಖ್ಯೆಯ ಮುಖಾಂತರ 30 ಎಕ್ಸಿಕ್ಯೂಟಿವ್ಗಳು ಗ್ರಾಹಕರ ಕರೆಗಳನ್ನು ಸ್ವೀಕರಿಸುತ್ತಾರೆ.
ಪ್ರಶ್ನೆ : ಬೆಸ್ಕಾಂ ಮುಖ್ಯಸ್ಥರಾಗಿ ನಿಮ್ಮ ಮುಂದಿರುವ ಪ್ರಮುಖ ಚಾಲೇಂಜ್ಗಳೇನು?
ಉತ್ತರ : ಪ್ರಮುಖ ಚಾಲೇಂಜ್ ಎಂದರೆ ವಿದ್ಯುತ್ ಸಂಪರ್ಕ ಅಡಚಣೆಯನ್ನು ನಿವಾರಿಸಿ ಗ್ರಾಹಕರಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಒದಗಿಸುವುದು. ಇದನ್ನು ಸಾಧಿಸಬೇಕಾದರೆ ಮೂಲಸಂಪರ್ಕ ವ್ಯವಸ್ಥೆಯನ್ನು ಉತ್ತಮಪಡಿಸಿ ದೋಷಗಳನ್ನು ಕಡಿಮೆ ಮಾಡುವುದು ಅಗತ್ಯವಾಗಿದೆ. ಗ್ರಾಹಕರ ದೂರುಗಳನ್ನು ಸ್ವೀಕರಿಸಿ ಆದಷ್ಟು ವೇಗವಾಗಿ ಪರಿಹಾರ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಈಗ ಮಳೆಗಾಲ ಶುರುವಾಗಿರುವುದರಿಂದ ಸಂಭವಿಸುವ ನೈಸರ್ಗಿಕ ದುರಂತಗಳನ್ನು ಎದುರಿಸಲು ಆಪತ್ತು ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications